Uncategorizedಕರಾವಳಿ

ಹಲವಾರು ಮಂದಿಯ ಜೀವ ರಕ್ಷಿಸಿ ಪ್ರಾಣ ಬಿಟ್ಟ ಬಸ್ ಚಾಲಕ, ಹೃದಯಾಘಾತದಿಂದ ಸಾಯುವ ಮೊದಲು ಆತ ಮಾಡಿದ್ದೇನು..?

ನ್ಯೂಸ್ ನಾಟೌಟ್: ಚಾಲಕರ ಅಜಾಗರೂಕತೆ ಚಾಲನೆಯಿಂದ ಅದೆಷ್ಟೋ ಸಲ ಘೋರ ಅವಘಡಗಳು ಸಂಭವಿಸಿ ನೂರಾರು ಜನರ ಪ್ರಾಣಕ್ಕೆ ಮುಳುವಾಗುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಕರ್ತವ್ಯದಲ್ಲಿ ಬಸ್ ಚಾಲಕ ತಾನು ಹೃದಯಾಘಾತದಿಂದ ಸಾಯುವ ಮೊದಲು ಹಲವಾರು ಮಂದಿಯ ಜೀವ ರಕ್ಷಿಸಿದ್ದಾರೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿ ಬಸ್​ ಸವದತ್ತಿಯಿಂದ ಪುಣೆಗೆ ತೆರಳುತ್ತಿದ್ದ ವೇಳೆ ಚಾಲಕನಿಗೆ(Bus Driver) ತೀವ್ರ ಹೃದಯಾಘಾತವಾಗಿದೆ. Belagavi ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಬಸ್ ಚಾಲಕ ಸವದತ್ತಿಯಿಂದ ಪುಣೆಗೆ ತೆರಳುತ್ತಿದ್ದ ಸಮಯದಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಆದ್ರೆ, ತಾನು ಸಾಯುವ ಮುನ್ನ ಬಸ್​ನಲ್ಲಿದ್ದ ಪ್ರಯಾಣಿಕರ ಜೀವ ಉಳಿಸಿದ್ದಾನೆ. ಹೌದು.. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಬಸ್​ ಅನ್ನು ರಸ್ತೆ ಬದಿ ಬಸ್ ನಿಲ್ಲಿಸಿ ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ, ದೊಡವಾಡ ಗ್ರಾಮದ ಮೂಗಪ್ಪ ಶಿವಪುತ್ರಪ್ಪ ಸಂಗೊಳ್ಳಿ (41) ಮೃತ ಚಾಲಕ.

ದೊಡವಾಡ ಗ್ರಾಮದ ಮೂಗಪ್ಪ ಶಿವಪುತ್ರಪ್ಪ ಸಂಗೊಳ್ಳಿ (41) ಮೃತ ಚಾಲಕ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸವದತ್ತಿ ಘಟಕಕ್ಕೆ ಸೇರಿದ ಬಸ್ ಪುಣೆಯಿಂದ ಸವದತ್ತಿಗೆ ಬರುವ ವೇಳೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಮಹಾರಾಷ್ಟ್ರದ ಖೇಡಶಿವಾಪುರ ಗ್ರಾಮದ ಬಳಿ ಶನಿವಾರ ರಾತ್ರಿ ತೀವ್ರ ಹೃದಯಾಘಾತವಾಗಿದ್ದು, ತೀವ್ರ ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ರಸ್ತೆ ಬದಿ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ.

ಎದೆ ನೋವಿನಿಂದ ನರಳುತ್ತಿದ್ದ ಮೂಗಪ್ಪರನ್ನು ಬಸ್‌ನಲ್ಲಿದ್ದ ಪ್ರಯಾಣಿಕರು ಕೂಡಲೇ ಆಂಬ್ಯುಲೆನ್ಸ್​ಗೆ ಕರೆ ಮಾಡಿ ರಸ್ತೆ ಪಕ್ಕದ ಹೊಟೇಲ್ ಗೆ ಎತ್ತಿಕೊಂಡು ಹೋಗಿ ಉಪಚಾರ ಮಾಡಿದ್ದಾರೆ. ಬಳಿ ಬಂದ ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಚಾಲಕ ಮೂಗಪ್ಪ ಶಿವಪುತ್ರಪ್ಪ ಕೊನೆಯುಸಿರು ಎಳೆದಿದ್ದಾರೆ.

Related posts

25 ವರ್ಷದ ಯುವತಿಯ ಮದ್ವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ

ಕಡಬ: ಶಾಂತಿಮೊಗರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ..! ಆಲಂಕಾರಿನ ಉದ್ಯಮಿ ಆತ್ಮಹತ್ಯೆ!

ಪುತ್ತೂರು : ಫಲಿಸಲಿಲ್ಲ ಚಿಕಿತ್ಸೆ , ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಕೊನೆಯುಸಿರು