ನ್ಯೂಸ್ ನಾಟೌಟ್: ಯುವಕ-ಯುವತಿಯರ ಗುಂಪು ಹೋಳಿ ಹಬ್ಬದ ಖುಷಿಯಲ್ಲಿ ಮಿಂದೇಳುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಮಂಗಳೂರಿನ ಮರೋಳಿ ಎಂಬಲ್ಲಿಂದ ವರದಿಯಾಗಿದೆ.
ಮರೋಳಿಯ ‘ಸೂರ್ಯ ವುಡ್ಸ್ ‘ನಲ್ಲಿ ಅರ್ಜುನ್ ಎಂಬವರು ಹೋಳಿ ಆಚರಣೆಗೆ ಅನುಮತಿ ಪಡೆದುಕೊಂಡಿದ್ದರು. ಭಾನುವಾರ ಮಧ್ಯಾಹ್ನ ಕೆಲ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹೋಳಿ ಆಚರಣೆಯಲ್ಲಿ ತೊಡಗಿದ್ದರು. ಈ ವೇಳೆ ಬಜರಂಗದಳದವರು ದಾಳಿ ನಡೆಸಿ ಅಳವಡಿಸಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದರು. ವಿದ್ಯಾರ್ಥಿಗಳು ತುಂಡುಡುಗೆ ತೊಟ್ಟಿದ್ದಕ್ಕೆ ಹಾಗೂ ಧ್ವನಿವರ್ಧಕ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ ಕಾರ್ಯಕ್ರಮ ಆಯೋಜಕರು ಹಾಗೂ ಬಜರಂಗದಳ ಕಾರ್ಯಕರ್ತರ ನಡುವೆ ಮಾತಿನ ಚಕ್ಕಮಕಿ ನಡೆದಿದ್ದು
ಸ್ಥಳಕ್ಕೆ ಕಂಕನಾಡಿ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.