Latestಕರಾವಳಿಕ್ರೈಂಮಂಗಳೂರು

ಮಂಗಳೂರಿನ ಕದ್ರಿ ದೇವಸ್ಥಾನದ ಬಳಿ ಅಕ್ರಮ ಗೋ ಮಾಂಸ ಸಾಗಾಟಗಾರರನ್ನು ತಡೆದ ಬಜರಂಗದಳ..! 100 ಕೆ.ಜಿ‌ಗೂ ಅಧಿಕ ಗೋ ಮಾಂಸ ಪತ್ತೆ..!

281

ನ್ಯೂಸ್ ನಾಟೌಟ್: ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಸೋಮವಾರ(ಮಾ.10) ನಡೆದಿದೆ.

ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಸ್ಥಳಕ್ಕೆ ಬಂದ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆ.ಜಿ‌ಗೂ ಅಧಿಕ ಗೋ ಮಾಂಸ ಇರುವುದು ಕಂಡುಬಂದಿದ್ದು, ಗೋ ಮಾಂಸ ಹಾಗೂ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಪಾಕಿಸ್ತಾನ​ ಪ್ರಧಾನಿ ಆಸ್ಪತ್ರೆಗೆ ದಾಖಲು..! ಯುದ್ಧ ಭೀತಿಯ ನಡುವೆ ಶೆಹಬಾಜ್ ಷರೀಫ್ ​ಗೆ ಅನಾರೋಗ್ಯ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget