ಕರಾವಳಿ

ಮಂಗಳೂರು: ಎಡಪದವು ಗ್ರಾಮದಿಂದ ಗೋವುಗಳನ್ನು ಕಳವುಗೈದ ಇಬ್ಬರ ಬಂಧನ, ಕಾರು ವಶ

173

ನ್ಯೂಸ್‌ ನಾಟೌಟ್‌: ಮಂಗಳೂರು ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ದಡ್ಡಿ ಎಂಬಲ್ಲಿ ಆ. 14ರಂದು ರಾತ್ರಿ ಮೂರು ದನಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ದನಕಳ್ಳರನ್ನು ಶನಿವಾರ (ಆ. 19) ಬಂಧಿಸಲಾಗಿದೆ.

ಬಂಧಿತರನ್ನು ಉಳ್ಳಾಲ ತಾಲೂಕಿನ ಇರ್ಫಾನ್‌ (30) ಮತ್ತು ಬಂಟ್ವಾಳ ತಾಲೂಕಿನ ಮೊಹಮ್ಮದ್‌ ಆರಿಫ್ (32) ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಬಳಸಿದ 5 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಬಜಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ದಡ್ಡಿ ಎಂಬಲ್ಲಿ ಆ. 14ರಂದು ರಾತ್ರಿ ಮೂರು ದನಗಳನ್ನು ಗೋಕಳ್ಳರು ಕಳವು ಮಾಡಿದ್ದರು. ಈ ಬಗ್ಗೆ ಬಜಪೆ ಠಾಣೆಯಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯಂತೆ ದೂರು ದಾಖಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಶನಿವಾರ ಇಬ್ಬರು ಗೋಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

See also  ಸುಳ್ಯ: ಚೆನ್ನಕೇಶವ ದೇವಸ್ಥಾನದಲ್ಲಿ ತುರ್ತು ಸಭೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget