ರಾಜಕೀಯರಾಜ್ಯವೈರಲ್ ನ್ಯೂಸ್

ಬಕ್ರೀದ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಸಿಎಂಗೆ ಮುಸ್ಲಿಂ ಟೋಪಿ ಹಾಕಿ ಸನ್ಮಾನ

154

ನ್ಯೂಸ್ ನಾಟೌಟ್: ಬಕ್ರೀದ್ (Bakrid ) ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಪಾಲ್ಗೊಂಡಿದ್ದರು. ಈ ವೇಳೆ ಮುಸಲ್ಮಾನ ಮುಖಂಡರು ಸಿಎಂಗೆ ಅಮಾಮ್ ಟೋಪಿ ಹಾಕಿ ಹಾಗೂ ಶಾಲನ್ನು ಹೊದಿಸಿ ಸನ್ಮಾನ ಮಾಡಿದ ಕಾರ್ಯಕ್ರಮ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದಿದೆ.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಎಂ, ನೀವೆಲ್ಲರೂ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೀರಿ. ಈ ಸಮಯದಲ್ಲಿ ನಾನು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರುತ್ತೇನೆ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ಇದು ಬಹುತ್ವದ ದೇಶ, ಎಲ್ಲಾ ಭಾಷೆ ಹಾಗೂ ಧರ್ಮಕ್ಕೆ ಸಮಾನತೆ ಕೊಡುವ ದೇಶ. ಮನುಷ್ಯತ್ವ ಬಹಳ ದೊಡ್ಡದು, ಎಲ್ಲರಲ್ಲೂ ಸಹಿಷ್ಣುತೆ ಬರಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳೆಯಬೇಕು. ಆಗ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು. ನಾವು ಯಾವುದೇ ರೀತಿಯ ತಾರತಮ್ಯವನ್ನು ಮಾಡುವುದಿಲ್ಲ. ರಾಜ್ಯದ 7 ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದು. ಈ ಕೆಲಸವನ್ನು ನಾವು ತಾರತಮ್ಯ ಇಲ್ಲದೇ ಮಾಡುತ್ತೇವೆ. ಅಲ್ಪಸಂಖ್ಯಾತರನ್ನು ಸಮಾನರಾಗಿ ನೋಡುವ ಮನೋಭಾವ ನಮ್ಮದು. ಈ ವರ್ಷ ಒಳ್ಳೆಯ ಮಳೆ ಹಾಗೂ ಬೆಳೆಯಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Click 👇

https://newsnotout.com/2024/06/venkateshwara-temple-tirupati-crowd-by-leaves
https://newsnotout.com/2024/06/darshan-fans-issue-electric-device-kannada-news
https://newsnotout.com/2024/06/uppendra-real-star-kannada-news-darshan-video
See also  ರಾತ್ರಿ ಊಟ ಮುಗಿಸಿ ಮಲಗಿದಾತ ಬೆಳಗ್ಗೆ ಏಳಲೇ ಇಲ್ಲ..! ಮಳೆ ಅವಾಂತರಕ್ಕೆ ದುರಂತ ಅಂತ್ಯ ಕಂಡ ಬಡ ಜೀವ
  Ad Widget   Ad Widget   Ad Widget   Ad Widget   Ad Widget   Ad Widget   Ad Widget