ನ್ಯೂಸ್ ನಾಟೌಟ್: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿರುವ ವಿಚಾರ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಬಾಣಂತಿಯರ ಸಾವಿಗೆ “ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ” ಕಾರಣವೆಂದು ಬೆಂಗಳೂರಿನ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ. 9 ಬ್ಯಾಚ್ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಹಾವೇರಿ, ಗದಗ ಜಿಲ್ಲಾಸ್ಪತ್ರೆಗಳಿಗೆ ಕೂಡ ಪೂರೈಕೆಯಾಗಿತ್ತು ಎನ್ನಲಾಗಿದೆ.
9 ಬ್ಯಾಚ್ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ತಲಾ ಮೂರು ಬ್ಯಾಚ್ ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೆ ಪೂರೈಕೆಯಾಗಿದ್ದವು. ಬೆಂಗಳೂರು, ಹಾವೇರಿ, ಗದಗಕ್ಕೆ ತಲಾ ಒಂದು ಬ್ಯಾಚ್ ಪೂರೈಕೆಯಾಗಿತ್ತು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾಳದ ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ವಿರುದ್ಧ ಆರೋಗ್ಯ ಇಲಾಖೆ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದೆ. ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ಒಟ್ಟು 192 ಬ್ಯಾಚ್ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿತ್ತು. ಇದರಲ್ಲಿ 22 ಬ್ಯಾಚ್ಗಳು ಉಪಯೋಗಕ್ಕೆ ಯೋಗ್ಯವಲ್ಲ (Not standard quality) ಎಂದು ಕರ್ನಾಟಕ ಔಷಧ ನಿಯಂತ್ರಣ ಇಲಾಖೆ ವರದಿ ನೀಡಿದೆ.
ಆದರೆ, ಫಾರ್ಮಾಸ್ಯುಟಿಕಲ್ಸ್ ಔಷಧ ಕಂಪನಿ ತಾನು ಪೂರೈಸಿದ್ದ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಯೋಗ್ಯ ಎಂದು ಹೈಕೋರ್ಟ್ ಕೇಂದ್ರ ಔಷಧ ನಿಯಂತ್ರಣ ಇಲಾಖೆ ವರದಿ ನೀಡಿದ್ದ ವರದಿಯನ್ನು ಸಲ್ಲಿಸಿತ್ತು. ಆದರೆ, ಕೇಂದ್ರ ಔಷಧ ನಿಯಂತ್ರಣ ಇಲಾಖೆ ವರದಿ 13 ಬ್ಯಾಚ್ಗಳು ಮಾತ್ರ ಬಳಸಲು ಯೋಗ್ಯ ಎಂದು ವರದಿ ನೀಡಿತ್ತು. ಇನ್ನುಳಿದ 9 ಬ್ಯಾಚ್ ಔಷಧಿಗಳು ಯೋಗ್ಯವಲ್ಲ ಎಂದು ಕೇಂದ್ರ ಔಷಧ ನಿಯಂತ್ರಣ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ. ಈ ಬಗ್ಗೆ ಕಾನೂನು ಹೋರಾಟ ನಡೆಯುತ್ತಿದೆ.
Click