ಕರಾವಳಿಕ್ರೈಂ

ಮಂಗಳೂರು: ಈಜುಕೊಳದಲ್ಲಿ ಬ್ಯಾಂಕ್‌ ಅಧಿಕಾರಿಯ ಮೃತದೇಹ ಪತ್ತೆ..!, ಹೋಟೆಲ್‌ಗೆ ತೆರಳಿದ ಅಧಿಕಾರಿ ಶವವಾಗಿದ್ದೇಗೆ..?

174

ನ್ಯೂಸ್‌ ನಾಟೌಟ್‌: ಮಂಗಳೂರಿನ ಪ್ರತಿಷ್ಠಿತ ಮೋತಿಮಹಲ್‌ ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್‌ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಎಂದು ಗುರುತಿಸಲಾಗಿದೆ.

ಯೂನಿಯನ್‌ ಬ್ಯಾಂಕ್‌ ಅಧಿಕಾರಿಯಾಗಿದ್ದ ಗೋಪು ಆರ್. ನಾಯರ್ ಭಾನುವಾರ ಮಂಗಳೂರಿಗೆ ಬಂದಿದ್ದು, ಇಲ್ಲಿನ ಮೋತಿಮಹಲ್‌ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಇಂದು ಮುಂಜಾನೆ 4 ಗಂಟೆಗೆ ಹೊಟೇಲ್ ರೂಮ್‌ನಿಂದ ಹೊರಹೋಗಿದ್ದರು. ಬಳಿಕ ಅವರ ಶವ ಹೋಟೆಲ್‌ನ ಈಜುಕೊಳದಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ಅಧಿಕಾರಿಯ ಸಾವಿಗೆ ಸ್ಪಷ್ಟ ಕಾರಣ ತಿಳಿದುಬರಲಿದೆ.

See also  ಧರ್ಮಸ್ಥಳ -ಸುಬ್ರಹ್ಮಣ್ಯ ದಾರಿ ನಡುವೆ ಓಮ್ನಿ ಕಾರು ಪಲ್ಟಿ..! ತೀರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದ ತಾಯಿ - ಮಗ ಆಸ್ಪತ್ರೆಗೆ ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget