ಕ್ರೀಡೆ/ಸಿನಿಮಾಕ್ರೈಂಪುತ್ತೂರು

ಬ್ಯಾಂಕ್ ನೌಕರನ ಹೆಸರಲ್ಲಿ ಪುತ್ತೂರಿನ ವ್ಯಕ್ತಿಗೆ ಭಾರಿ ವಂಚನೆ, ಅಪ್ಪಿ ತಪ್ಪಿ ಅಪರಿಚಿತರಿಗೆ ನೀವು ಓಟಿಪಿ ಕೊಟ್ರೆ ನಿಮಗೂ ಹೀಗೆಯೇ ಆಗುತ್ತೆ..!

ನ್ಯೂಸ್ ನಾಟೌಟ್: ಬ್ಯಾಂಕ್ ನೌಕರನ ಹೆಸರಿನಲ್ಲಿ ಬಂದ ಕರೆಗೆ ಸ್ಪಂದಿಸಿ ಮೊಬೈಲ್ ಗೆ ಬಂದ ಒಟಿಪಿಯನ್ನು ಕೊಟ್ಟ ಪುತ್ತೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 1,73, 000 ರೂ. ಅನ್ನು ಕಳೆದುಕೊಂಡಿದ್ದಾರೆ. ಸಂತ್ರಸ್ಥರು ಇದೀಗ ಹಣವನ್ನೆಲ್ಲ ಕಳೆದುಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 24-2024 ಕಲಂ: IPC 1860 ಕಲಂ-417,419,420 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರೂ ಕೂಡ ಇರುತ್ತಾರೆ. ಕೆಲವು ಸಲ ಬೇಲಿಯೇ ಎದ್ದು ಹೊಲ ಮೇದ ಸ್ಥಿತಿ ಕೂಡ ನಿರ್ಮಾಣವಾಗುತ್ತದೆ. ಚಂದ್ರಶೇಖರ ಭಟ್ (62 ವರ್ಷ) ಬ್ಯಾಂಕ್ ಸಿಬ್ಬಂದಿ ಹೆಸರಿನಲ್ಲಿ ಕೆವೈಸಿ ಅಪ್ಡೆಟ್ ಮಾಡುವ ಕುರಿತು ಸಂದೇಶ ಬಂದಿದೆ. ಸದ್ರಿ ಸಂದೇಶದಲ್ಲಿ ಬಂದಿರುವ ಒಟಿಪಿಯನ್ನು ಚಂದ್ರಶೇಖರ ಭಟ್ ಅಪರಿಚಿತನಿಗೆ ಫೋನ್ ಕರೆಯಲ್ಲಿ ನೀಡಿದ್ದಾರೆ. ಇದಾದ ತಕ್ಷಣ ಇವರ ಅಕೌಂಟ್ ನಿಂದ ಹಣ ಹೋಗುವುದಕ್ಕೆ ಶುರುವಾಗಿದೆ. ಹಂತ ಹಂತವಾಗಿ ಖಾತೆಯಿಂದ ಹಣ ಕಳೆದುಕೊಂಡ ಅವರು ಅಂತಿಮವಾಗಿ 1,73, 000 ರೂ. ಅನ್ನು ಕಳೆದುಕೊಂಡಿದ್ದಾರೆ.

Related posts

ಬರ್ತ್‌ಡೇಗೆ ನನ್ನ ಕಟೌಟ್‌, ಬ್ಯಾನರ್‌ ಹಾಕಬೇಡಿ..!,ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್‌ ಈ ರೀತಿ ಹೇಳಿದ್ಯಾಕೆ?

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತಂದ ಸಿಸಿಬಿ ಪೊಲೀಸರು, ಕಟಕ್ ನಲ್ಲಿ ಟೀ ಶರ್ಟ್ ಹಾಕಿ ಓಡಾಡುತ್ತಿದ್ದ ಸ್ವಾಮೀಜಿಗೆ ಇನ್ಮುಂದೆ ಪೊಲೀಸ್ ಡ್ರಿಲ್..!

ಮಂಗಳೂರು:ಮಂಗಳೂರು ಉತ್ತರ ಕ್ಷೇತ್ರದಿಂದ ಮೊಯ್ದಿನ್ ಬಾವಾ ಕಣಕ್ಕೆ,ಕಾಂಗ್ರೆಸ್ ತೊರೆದು ಜೆಡಿಎಸ್ ನಿಂದ ಸ್ಪರ್ಧೆ