ಕರಾವಳಿಕ್ರೈಂ

ಬಂಟ್ವಾಳ: ಹಿಂದೂ ಮುಖಂಡನಿಗೆ ರಾತ್ರಿ ಚೂರಿ ಇರಿತ..! ಸ್ನೇಹಿತನಿಂದಲೇ ಕೃತ್ಯ..!

184

ನ್ಯೂಸ್ ನಾಟೌಟ್: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ ಎಮದು ವರದಿ ತಿಳಿಸಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು ,ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಕಾಸರಗೋಡು: ವಾಟ್ಸ್‌ ಆ್ಯಪ್ ಮೂಲಕ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ವಿರುದ್ಧ ಎಫ್.ಐ.ಆರ್..! ಗಲ್ಫ್‌ ನಲ್ಲಿ ಕೆಲಸ ಮಾಡುತ್ತಿರುವ ರಜಾಕ್ ವಿರುದ್ಧ ದೂರು ದಾಖಲು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget