Latestಕ್ರೈಂದಕ್ಷಿಣ ಕನ್ನಡರಾಜ್ಯ

ಬಿ.ಸಿ.ರೋಡ್ ನ ಕೈಕಂಬದ ಸಮೀಪ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ..! ಚಾಲಕ ಸಾವು..!

426

ನ್ಯೂಸ್ ನಾಟೌಟ್: ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆ.75ರ ಬಿ.ಸಿ.ರೋಡ್- ಕೈಕಂಬದ ಸಮೀಪ ಮಂಗಳವಾರ(ಮೇ.27) ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಮಂಚಿ ಗ್ರಾಮದ ಭಂಡಾರಕೊಟ್ಟಿಗೆ ನಿವಾಸಿ ಜಯರಾಮ್ (50) ಎಂದು ಗುರುತಿಸಲಾಗಿದೆ.

ಜಯರಾಮ್ ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಂದು(ಮೇ.27) ಮುಂಜಾನೆ ಮನೆಯಿಂದ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆಯಬೇಡಿ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ ಗೃಹಸಚಿವ..! ಅಧಿಕಾರಿಗಳ ಜೊತೆ ಜಿ ಪರಮೇಶ್ವರ್ ಸಭೆ

ನಿಗೂಢವಾಗಿ ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ಶವವಾಗಿ ಪತ್ತೆ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?

See also  ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ, ಜಾಮೀನು ಮಂಜೂರಾಗಿದ್ದರೂ ಪೊಲೀಸ್ ಠಾಣೆಗೆ ಬಂದು ಶಿಕ್ಷೆಗೊಳಪಡಬೇಕೆಂದು ಹೈಕೋರ್ಟ್ ಆದೇಶ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget