Latestಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಬೆಳಗಾವಿಯಲ್ಲಿ ಮರಾಠರಿಂದ KSRTC ಕಂಡಕ್ಟರ್ ಮೇಲೆ ಹಲ್ಲೆ..! ನಿರ್ವಾಹಕರ ಮೇಲೆಯೇ ಅತ್ಯಾಚಾರ ಕೇಸ್‌ ದಾಖಲು..!

621
Pc CR: One india kannada

ನ್ಯೂಸ್ ನಾಟೌಟ್: ಬೆಳಗಾವಿಯಲ್ಲಿ ನಡೆದಿರುವ ಬೆಳವಣಿಗೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಹೆಚ್ಚಾಗಿದೆ. ಇದಕ್ಕೆಲ್ಲ ಇಲ್ಲಿನ ರಾಜಕಾರಣಿಗಳ ಅಡ್ಜೆಸ್ಟಮೆಂಟ್ ರಾಜಕೀಯ ಹಾಗೂ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದ್ದರೂ ಸುಮ್ಮನೆ ಇರುವುದೇ ಕಾರಣ ಎಂದು ಹಲವರು ಪ್ರತಿಭಟಿಸುತ್ತಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆದಿರುವ ಹಲ್ಲೆ ಪ್ರಕರಣವೂ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ಹೋರಾಟಗಾರರು ಈ ವಿಚಾರದಲ್ಲಿ ಆಕ್ಷೇಪಣೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ಇರುವಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್‌ ಸಿಕ್ಕಿದೆ.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ಸಹ ದಾಖಲಾಗಿದೆ. ಕಂಡಕ್ಟರ್ ಮಹದೇವಪ್ಪ ಹುಕ್ಕೇರಿ, ಬಸ್‌ ನಲ್ಲಿ ಯುವತಿ ಮರಾಠಿಯಲ್ಲಿ ಟಿಕೆಟ್ ಕೇಳಿದ್ದಕ್ಕೆ, ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದರು. ಇಷ್ಟಕ್ಕೆ ಬಸ್‌ ನಲ್ಲಿದ್ದ ಮರಾಠಿ ಪುಂಡರು ಕಂಡಕ್ಟರ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಅಲ್ಲದೆ ಈ ರೀತಿ ಕಂಡಕ್ಟರ್‌ನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆದರೆ, ಈ ನಡುವೆ ಕಂಡಕ್ಟರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಬಾಲಕಿ ಮೇಲೆ ಕಂಡಕ್ಟರ್ ಮಹದೇವಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹದೇವಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

See also  ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ..! ಚುನಾವಣಾ ಆಯೋಗದಿಂದ ನೋಟಿಸ್​
  Ad Widget   Ad Widget   Ad Widget   Ad Widget   Ad Widget   Ad Widget   Ad Widget