ಕ್ರೈಂ

ಬೆಳ್ಳಾರೆ: ಮಸೀದಿಯಲ್ಲಿ ಎರಡೂ ತಂಡಗಳ ನಡುವೆ ಹೊಡೆದಾಟ, ಆಸ್ಪತ್ರೆಗೆ ದಾಖಲು

812

ಸುಳ್ಯ: ಬೆಳ್ಳಾರೆ ಮಸೀದಿಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಇತ್ತಂಡಗಳ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ಆಸಿರ್, ಹಾರಿಸ್, ಹಮೀದ್, ಮುನೀರ್, ಹೈದರಾಲಿ ಮತ್ತು ಮಹಮ್ಮದ್ ಅಜರುದ್ದೀನ್, ಜಮಾಲುದ್ದೀನ್ ಕೆ.ಎಸ್, ಅಬ್ದುಲ್ ಜಮಾಲ್ ಮಧ್ಯೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟ ನಡೆಯಿತು ಎನ್ನಲಾಗಿದೆ. ಗಾಯಗೊಂಡ ಅಜರುದ್ದೀನ್ ಪುತ್ತೂರು ಸರಕಾರಿ ಆಸ್ಪತ್ರೆ ಯಲ್ಲಿ ದಾಖಲಾಗಿದೆ. ಹೈದರಾಲಿ ಮತ್ತು ಆಸಿರ್ ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಎರಡೂ ಕಡೆಯವರು ಪೊಲೀಸು ದೂರು ನೀಡಿದ್ದು ಇತ್ತಂಡದ ಮೇಲೆ ಪ್ರಕರಣ ದಾಖಲಾಗಿದೆ.

See also  'ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ನಡೆದಿಲ್ಲ' ಮಕ್ಕಳ ವಿಶೇಷ ನ್ಯಾಯಾಲಯ ಅಭಿಪ್ರಾಯ
  Ad Widget   Ad Widget     Ad Widget   Ad Widget   Ad Widget   Ad Widget