ಕರಾವಳಿಕ್ರೈಂ

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆ! ತಂಗಿಗೆ ಕಳುಹಿಸಿದ ಸಂದೇಶದಲ್ಲಿ ಏನಿತ್ತು …?

217

ನ್ಯೂಸ್ ನಾಟೌಟ್ : ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ, ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಬಳ್ಳಾರಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ .

ಭಾನುವಾರ ಮಧ್ಯಾಹ್ನ ತನ್ನ ತಂಗಿಗೆ ಮೊಬೈಲ್ ಸಂದೇಶ ಕಳುಹಿಸಿರುವ ಕಿಶನ್ ಶೆಟ್ಟಿ ನಾನು ಬಳ್ಳಾರಿಯಲ್ಲಿದ್ದೇನೆ. ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.ಈ ಮೂಲಕ ಪುತ್ರನ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿದುಬಂದಿದೆ. ಮೇ31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್ ಶೆಟ್ಟಿ ಆ ಬಳಿಕ ನಾಪತ್ತೆಯಾಗಿದ್ದರು. ಈತ ಭಾನುವಾರ ಮಧ್ಯಾಹ್ನ ಸಹೋದರಿ ಮೊಬೈಲ್‌ಗೆ ಸಂದೇಶ ಕಳುಹಿಸಿದ್ದಾನೆ.

ನಾನು ಬಳ್ಳಾರಿಯಲ್ಲಿ ಇದ್ದೇನೆ. ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ ಮುಂದೆ ಇಟ್ಟಿದ್ದೇನೆ. ಆದರೆ ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಹೇಳಿದ್ದಾನೆ. ತಂಗಿ ಕರೆ ಮಾಡಲು ಯತ್ನಿಸಿದ್ದು, ಆದರೆ ಕಿಶನ್ ಶೆಟ್ಟಿ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ. ತಂಗಿ ತಂದೆಗೆ ಮಾಹಿತಿ ನೀಡಿದ್ದು, ಐತಪ್ಪ ಶೆಟ್ಟಿ ಅವರು ಕೊಣಾಜೆ ಠಾಣೆಗೆ ಹೋಗಿ ಕರೆಬಂದ ಬಗ್ಗೆ ಮಾಹಿತಿ ನೀಡಿದ್ದಾರೆ . ಪೊಲೀಸರು ಟವರ್‌ ಲೋಕೇಶನ್ ಸರ್ಚ್ ಮಾಡಿದಾಗ ಬಳ್ಳಾರಿಯ ಗ್ರಾಮಾಂತರ ಭಾಗದಲ್ಲಿ ಟವರ್ ಲೊಕೇಶನ್‌ ತೋರಿಸಿದೆ. ಅರ್ಧ ಗಂಟೆಗೊಮ್ಮೆ ಕೆಲವು ಕಿಲೋ ಮೀಟರ್ ಅಂತರ ಲೊಕೇಶನ್‌ ತೋರಿಸುತ್ತಿದ್ದು, ಪೊಲೀಸರು ಆತನ ಪತ್ತೆಗೆ ನಿರಂತರ ಯತ್ನ ಮುಂದುವರಿಸಿದ್ದಾರೆ.

See also  ಸುಬ್ರಹ್ಮಣ್ಯ ಪರಿಸರಕ್ಕೆ ಮಳೆಯ ಸ್ಪರ್ಷ,ಎಪ್ರಿಲ್ ತಿಂಗಳಲ್ಲಾದ ಮೂರನೇ ಬಾರಿಯ ಮಳೆಗೆ ಫುಲ್ ಖುಷ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget