ಕರಾವಳಿಪುತ್ತೂರುರಾಜಕೀಯ

ಬೆಳ್ತಂಗಡಿ: ಬಿಜೆಪಿ ಚುನಾವಣಾ ಪ್ರಚಾರ ವಾಹನ ವಶಕ್ಕೆ

ನ್ಯೂಸ್‌ ನಾಟೌಟ್‌: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಚುನಾವಣಾ ಪ್ರಚಾರ ವಾಹನವನ್ನು ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬಿಜೆಪಿಯ ಚುನಾವಣಾ ಪ್ರಚಾರದ ವಾಹನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಫೋಟೊ ಉಪಯೋಗಿಸಿದ ಬಗ್ಗೆ ಆರೋಪ ಕೇಳಿ ಬಂದಿತ್ತು. ಅಲ್ಲದೇ ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಎಲ್.ಇ‌.ಡಿ.ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಫೋಟೊವನ್ನು ಉಪಯೋಗಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿ ಶ್ರೀ ಕ್ಷೇತ್ರದ ಫೋಟೊ ಬಳಸುತ್ತಿದ್ದ ಬಗ್ಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು.

Related posts

ಕೇರಳದ ಏಕೈಕ ಬಿಜೆಪಿ ಸಚಿವ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡ್ತಾರಾ..? ನಟ ಸುರೇಶ್ ಗೋಪಿ ಈ ನಿರ್ಧಾರದ ಬಗ್ಗೆ ಹೇಳಿದ್ದೇನು..?

‘ನ್ಯೂಸ್ ನಾಟೌಟ್’ ವರದಿ ತಿರುಚಿ ಬರೆದು ಸಿಕ್ಕಿಬಿದ್ದ ಕಿಡಿಗೇಡಿಗಳು..!, ಶೇರ್‌ ಮಾಡಿ ವಿಕೃತಿ ಮೆರೆದವರಿಗೂ ತಟ್ಟಲಿದೆ ಬಿಸಿ

ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ವಿವಿ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ