ಕರಾವಳಿ

ಬೆಳ್ತಂಗಡಿ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅಮಾನತು !ಮರಗಳ್ಳರೊಂದಿಗೆ ಶಾಮೀಲಾದ ಆರೋಪ

183

ನ್ಯೂಸ್‌ ನಾಟೌಟ್‌: ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಅಕ್ರಮ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ದುರುಪಯೋಗ ಮಾಡಿದ ನೆಲೆಯಲ್ಲಿ ಇಲಾಖೆ ಕ್ರಮ ಕೈಗೊಂಡಿದ್ದು, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ.

ಕಳಂಜ ಗ್ರಾಮದಲ್ಲಿ 2.5ಎಕ್ರೆ ಪ್ರದೇಶದಲ್ಲಿನ ಮರಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿಯಲಾಗಿತ್ತು. ಆದರೆ ಇಲಾಖೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳದೆ ಸೊತ್ತುಗಳನ್ನು ಸಾಗಾಟ ಮಾಡಲು ಅವಕಾಶ ಮಾಡಿಕೊಟ್ಟು ಮರಗಳ್ಳರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ತ್ಯಾಗರಾಜ್‌ ಅವರ ಮೇಲಿತ್ತು. ಈ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ನಡೆಸಿ, ಇದೀಗ ತ್ಯಾಗರಾಜ್ ಅವರನ್ನು ಅಮಾನತುಗೊಳಿಸಿ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

See also  ಕಲ್ಲುಗುಂಡಿ: ಮನೆಮಂದಿ ಆಸ್ಪತ್ರೆಗೆಂದು ತೆರಳಿದ್ದ ವೇಳೆ ಹಾಡಹಗಲೇ ಮನೆಯೊಳಗೆ ನುಗ್ಗಿದ ಖದೀಮರು..!,ನಗದು,ಚಿನ್ನ ಸೇರಿದಂತೆ ಬೆಳ್ಳಿಯನ್ನೂ ಕದ್ದೊಯ್ದು ಕಳ್ಳರು ಎಸ್ಕೇಪ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget