ಕ್ರೈಂದಕ್ಷಿಣ ಕನ್ನಡರಾಜ್ಯವೈರಲ್ ನ್ಯೂಸ್

ಬೆಳ್ತಂಗಡಿ:ಎರಡು ಮನೆಯಲ್ಲಿ ಮಧ್ಯರಾತ್ರಿ ಕಳ್ಳತನ..! ಸಂಜೆ ದೈವದ ಕೋಲಕ್ಕೆ ತೆರಳಿದ್ದ ಕುಟುಂಬಸ್ಥರು

169
Pc cr: Udayavani

ನ್ಯೂಸ್ ನಾಟೌಟ್: ಮಧ್ಯರಾತ್ರಿ ಹಳ್ಳಿಯ ಎರಡು ಮನೆಗಳಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳ್ತಂಗಡಿಯ ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಮೇ. 22 ರಂದು ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಮನೆಯಲ್ಲಿ ತಮ್ಮ ಮಗ ಮತ್ತು ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ, ಇತರ ದಾಖಲೆಗಳ ಬ್ಯಾಗನ್ನೇ ಎಗರಿಸಿ ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಮನೆಮಂದಿ ಮಲಗಿದ್ದರೂ ಕಳ್ಳರು ಎಚ್ಚರವಾಗದಂತೆ ಕದ್ದಿದ್ದಾರೆ ಎನ್ನಲಾಗಿದೆ. 200 ಮೀಟರ್ ದೂರದ ಕರಂಬಾರು ಗ್ರಾಮದ ಮುಂಡೆಲ್ ವಿಶ್ವನಾಥ ಶೆಟ್ಟಿ ಮನೆಯಲ್ಲೂ ಕಳ್ಳತನ ನಡೆದಿದೆ. ವಿಶ್ವನಾಥ ಶೆಟ್ಟಿ ಮನೆಯವರ ಸಂಬಂಧಿಕರ ಮನೆಯಲ್ಲಿ ಕೋಲ ಇರುವ ಕಾರಣ ಸಂಜೆ ತೆರಳಿದ್ದು ಮನೆಯ ಬಾಗಿಲು ಒಡೆದು 4 ಪವನ್ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Click 👇

https://newsnotout.com/2024/05/prajwal-revanna-passport-issue-kannada-news
https://newsnotout.com/2024/05/hindu-muslim-case-court-issue
https://newsnotout.com/2024/05/love-women-and-boy
See also  ಬೆಳ್ಳಾರೆ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ..! ಸ್ಥಳಕ್ಕೆ ತೆರಳಿದ ಪೊಲೀಸರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget