ಬೆಂಗಳೂರು

ಭಿಕ್ಷಾಟನೆ ಸುಳಿಯಲ್ಲಿದ್ದ 21 ಮಕ್ಕಳನ್ನು ರಕ್ಷಿಸಿದ ಸಿಸಿಬಿ

338

ನ್ಯೂಸ್ ನಾಟೌಟ್ : ಬೆಂಗಳೂರಿನ ಪ್ರಮುಖ ಸಂಚಾರ ಜಂಕ್ಷನ್‌ಗಳಲ್ಲಿ ಮಕ್ಕಳನ್ನು ಕಿಡ್ನಾಪ್ ಮಾಡಿ ಭಿಕ್ಷೆ ಬೇಡಿಸುತ್ತಿದ್ದ ಖದೀಮರನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಭಿಕ್ಷಾಟನೆ ನಡೆಸುತ್ತಿದ್ದ 21 ಮಕ್ಕಳನ್ನು ರಕ್ಷಿಸಲಾಗಿದೆ.

ಘಟನೆಯಿಂದ ಇಡೀ ಸಿಲಿಕಾನ್ ಸಿಟಿ ಬೆಚ್ಚಿ ಬಿದ್ದಿದೆ. ತನ್ನ ಅವಶ್ಯಕತೆಗೆ ಬೇಕಾದ ಹಣವನ್ನು ಪಡೆಯಲು ಸಣ್ಣ ಮಕ್ಕಳನ್ನು ಅಪಹರಿಸಿ ಭಿಕ್ಷೆ ಬೇಡಿಸುತ್ತಿದ್ದ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಖದೀಮರನ್ನು ಇದೀಗ ಸಿಸಿಬಿಯವರ ಬಂಧಿಸಿದ್ದಾರೆ. ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಿಕ್ಷಾಟನೆ ನಡೆಸುತ್ತಿದ್ದ ಹತ್ತು ಮಂದಿ ಮಹಿಳೆಯರನ್ನು 7 ಬಾಲಕರು, 3 ಬಾಲಕಿಯರು, ಹಾಗು 9 ಹಸುಗೂಸುಗಳು ಸೇರಿ ಒಟ್ಟು 29 ಮಂದಿಯನ್ನು ರಕ್ಷಿಸಲಾಗಿದೆ. ಬಳಿಕ ಪುನರ್ವಸತಿ ಕೇಂದ್ರಕ್ಕೆ ಅವರನ್ನೆಲ್ಲ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

See also  ಸುಳ್ಯ: ಆರಂಭದಲ್ಲೇ ಮುನ್ನಡೆ ಕಾಯ್ದುಕೊಂಡ ಬಿಜೆಪಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget