ಬೆಂಗಳೂರುರಾಜ್ಯವೈರಲ್ ನ್ಯೂಸ್

ಐತಿಹಾಸಿಕ ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ, ಒಟ್ಟು 11 ದಿನಗಳ ಕಾಲ ನಡೆಯಲಿದೆ ಮಹೋತ್ಸವ

183

ನ್ಯೂಸ್ ನಾಟೌಟ್: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ ಆಗಿದ್ದು, ಏ.4ರಿಂದ 14ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ.

ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ ಎನ್ನಲಾಗಿದೆ. ಜ್ಞಾನೇಂದ್ರ 15ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ನಿನ್ನೆ ಅಂದರೆ ಫೆ.27ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.

ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಆರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

Click

https://newsnotout.com/2025/01/nayan-tara-and-danush-madras-high-court-viral-news-d/
https://newsnotout.com/2025/01/finance-company-kannada-news-teacher-d/
https://newsnotout.com/2025/01/bengaluru-dating-app-viral-news-marriage-d/
https://newsnotout.com/2025/01/gisar-kannada-news-police-case-twist-viral-news-d/
https://newsnotout.com/2025/01/key-pad-mobile-phone-issue-hospital-hjd/
https://newsnotout.com/2025/01/tiger-issue-viral-news-kerala-viral-news-df/
https://newsnotout.com/2025/01/modi-and-trup-call-conversation-kannada-news-white-house/
See also  ನವಿಲು ಮಾಂಸದ ರೆಸಿಪಿಯ ವಿಡಿಯೋ ಮಾಡಿದ ಯೂಟ್ಯೂಬರ್..! ಆತನನ್ನು ವಶಕ್ಕೆ ಪಡೆದು, 'ನವಿಲು ಕರಿ' ಮಾದರಿಯನ್ನು ವಿಧಿವಿಜ್ಞಾನ ಇಲಾಖೆಗೆ ಕಳುಹಿಸಿದ ಅಧಿಕಾರಿಗಳು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget