Latestಕ್ರೈಂಬೆಂಗಳೂರುರಾಜಕೀಯರಾಜ್ಯ

ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ವಜಾ..! ಗುಪ್ತಚರ ಇಲಾಖೆಯ ಮುಖ್ಯಸ್ಥರೂ ಎತ್ತಂಗಡಿ..!

539

ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಗೋವಿಂದರಾಜ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ರಾಜ್ಯ ಸರ್ಕಾರ ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದೆ.

ಬೆಂಗಳೂರು ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆ ವೈಫಲ್ಯ ಎನ್ನುವ ಮಾತುಗಳು ಜೋರಾಗುತ್ತಿದ್ದಂತೆಯೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ, ಯಾವಾಗ ಕೊನೆಯ ದಿನಾಂಕ..?

See also  ಚಲಿಸುತ್ತಿದ್ದ ವಿಮಾನದೊಳಗೆ ಮಹಿಳೆಯರ ಕಾಳಗ! ತುರ್ತು ಭೂ ಸ್ಪರ್ಶ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget