ಕ್ರೈಂಬೆಂಗಳೂರು

ಸರ್ಕಾರಿ ಬಸ್ ನಡಿಗೆ ಬಿದ್ದದ್ದೇಗೆ ಈಕೆ..? ಬಸ್ ಚಾಲಕ, ನಿರ್ವಾಹಕ ಅಲ್ಲೆ ಬಿಟ್ಟು ಓಡಿದ್ದೆಲ್ಲಿಗೆ..? ಆ ಮಗು ಬಚಾವಗಿದ್ದೇಗೆ?

172

ನ್ಯೂಸ್ ನಾಟೌಟ್ : ಬಿಎಂಟಿಸಿ (BMTC) ಬಸ್‌ಗೆ ಬುಧವಾರ(ಡಿ.14) ಸಂಜೆ ಗೃಹಿಣಿಯೊಬ್ಬರು ಬಲಿಯಾದ ಘಟನೆ ಬೆಂಗಳೂರಿನ ಸಿಲ್ಕ್‌ಬೋರ್ಡ್‌ (Sikboard) ಸಮೀಪದ ಮಡಿವಾಳ ಫ್ಲೈಓವರ್ (Madiwala Flyover) ಮೇಲೆ ನಡೆದ ಬಗ್ಗೆ ವರದಿ ತಿಳಿಸಿದೆ.

ಸೀಮಾ ಎಂಬಾಕೆ ಬಿಎಂಟಿಸಿಗೆ ಬಲಿಯಾದ ಗೃಹಿಣಿ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ 6:30ರ ವೇಳೆಗೆ ಘಟನೆ ನಡೆದಿದ್ದು, ಗೃಹಿಣಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಸ್ ಪಕ್ಕದಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಗುದ್ದಿದ್ದರಿಂದ ಸವಾರರು ಆಯತಪ್ಪಿ ಬಿದ್ದಿದ್ದಾರೆ. ಘಟನೆಯಲ್ಲಿ ಗೃಹಿಣಿ ಸಾವನ್ನಪ್ಪಿದರೆ ಒಂದೂವರೆ ವರ್ಷದ ಮಗು ಗಾನವಿ ಹಾಗೂ ಆಕೆಯ ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ ಎನ್ನಲಾಗಿದೆ.

ತಮ್ಮ ಮಗುವಿನೊಂದಿಗೆ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಪತಿ ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿಯಾಗಿದ್ದು, ಕಳೆದ 8 ವರ್ಷದಿಂದ ಬೆಸ್ಕಾಂನಲ್ಲಿ ಲೈನ್‌ಮೆನ್ ಆಗಿ ಕೆಲಸ ಮಾಡುತ್ತಿದ್ದಾರೆ. ಘಟನೆ ಬಳಿಕ ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ ಮತ್ತು ಪೊಲೀಸರು ಅವರಿಗೆ ಬಲೆ ಬೀಸಿದ್ದು ತನಿಖೆ ಚುರುಕುಗೊಂಡಿದೆ.

https://newsnotout.com/2023/12/samsath-lokasabha-news/
See also  ಉಡುಪಿ: ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಜ್ಯುವೆಲ್ಲರಿ ಸಿಬ್ಬಂದಿಯ ಮೃತದೇಹ ಬಾವಿಯಲ್ಲಿ ಪತ್ತೆ..! ರಾತ್ರಿ ಮನೆಯಲ್ಲಿ ನನಗೆ ಹೆದರಿಕೆ ಆಗುತ್ತದೆ, ಈಗ ಬರುತ್ತೇನೆಂದು ಹೇಳಿ ಹೋಗಿದ್ದ ವ್ಯಕ್ತಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget