ಕ್ರೈಂಬೆಂಗಳೂರುವೈರಲ್ ನ್ಯೂಸ್

ಬೆಂಗಳೂರಿಗೆ ಕೆಲಸ ಹುಡುಕಿ ಬರುವವರೇ ಎಚ್ಚರ..!ನೌಕರಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ! 16 ಕ್ರೆಡಿಟ್ ಕಾರ್ಡ್‌ ಮತ್ತು ಚೆಕ್ ಬುಕ್ ಗಳು ಪತ್ತೆ!

160

ನ್ಯೂಸ್‌ ನಾಟೌಟ್‌ : ನಿರುದ್ಯೋಗ ನಿವಾರಣೆಗೆ ಬೆಂಗಳೂರು ಒಂದು ದಿವ್ಯಾಔಷಧಿ, ಆದರೆ ಹಲವರ ಅನಿವಾರ್ಯಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವವರ ಮಧ್ಯೆ ಯುವಕರು ಜಾಗೃತರಾಗಿರುವುದು ಉತ್ತಮ. ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಮಾಡುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಫೆ.21 ರಂದು ಬಂಧಿಸಿದ್ದಾರೆ.

ಬೆಂಗಳೂರಿನ ದೊಡ್ಡಬೊಮ್ಮಸಂದ್ರ ನಿವಾಸಿಗಳಾದ ಪ್ರಕಾಶ್ ಮತ್ತು ಮಧು ಬಂಧಿತ ದಂಪತಿ ಎಂದು ವರದಿ ತಿಳಿಸಿದೆ. ಆರೋಪಿಗಳಿಂದ 2 ಲಕ್ಷ ರು.ನಗದು, 4 ಮೊಬೈಲ್‌ ಫೋನ್‌ಗಳು, ದ್ವಿಚಕ್ರ ವಾಹನ, ಆರು ಬ್ಯಾಂಕ್‌ ಖಾತೆಗಳಿಗೆ ಸೇರಿದ 16 ಕ್ರೆಡಿಟ್ ಕಾರ್ಡ್‌, ಡೆಬಿಟ್ ಕಾರ್ಡ್, ಚೆಕ್‌ಬುಕ್‌ಗಳು, 11 ವಿವಿಧ ಕಂಪನಿಯ ವಾಚ್ ಗಳು,ಚಿನ್ನದಂತೆ ಕಾಣುವ 2 ನಕಲಿ‌ ಬ್ರಾಸ್ ಲೈಟ್, 1 ಚೈನ್, 2 ಉಂಗುರ, 2 ಪೆಂಡೆಂಟ್ ಗಳು ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಯುವಕನೊಬ್ಬನಿಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿಸಿ ಬಳಿಕ ಕಾಯಂ ಗೊಳಿಸುವ ಭರವಸೆ ನೀಡಿ 6 ಲಕ್ಷ ರು. ಪಡೆದಿದ್ದರು. ನಂತರ ಕಾಯಂ ಉದ್ಯೋಗ ಕೊಡಿಸದೆ ತಲೆಮರೆಸಿಕೊಂಡಿದ್ದರು. ಈ ಸಂಬಂಧ ನೊಂದ ಯುವಕ ದೂರು ನೀಡಿದ್ದರು. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ದಂಪತಿಯನ್ನು ಬಂಧಿಸಲಾಗಿದೆ.

ಆರೋಪಿ ದಂಪತಿ ವಂಚನೆಯನ್ನು ವೃತ್ತಿಯಾಗಿ ಮಾಡಿಕೊಂಡಿದ್ದರು. ಪದವಿ ಮುಗಿಸಿ ಉದ್ಯೋಗಕ್ಕೆ ಹುಡುಕಾಡುವ ನಿರುದ್ಯೋಗಿಗಳನ್ನು ಗುರಿಯಾಗಿಸಿ ಪರಿಚಯಿಸಿಕೊಳ್ಳುತ್ತಿದ್ದರು. ನಮಗೆ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳು, ನಿಗಮ ಮಂಡಳಿಗಳ ಉನ್ನತ ಅಧಿಕಾರಿಗಳು ಹಾಗೂ ಮುಖ್ಯಸ್ಥರ ಪರಿಚಯವಿದೆ. ಖಾಲಿ ಇರುವ ಹುದ್ದೆಗಳನ್ನು ಕೊಡಿಸುವುದಾಗಿ ಆಸೆ ಹುಟ್ಟಿಸುತ್ತಿದ್ದರು. ಬಳಿಕ ಲಕ್ಷಾಂತರ ರೂ. ಹಣ ಪಡೆದು ಶೀಘ್ರದಲ್ಲೇ ನೇಮಕಾತಿ ಪತ್ರ ಸಿಗಲಿದೆ ಎಂದು ಹೇಳುತ್ತಿದ್ದರು. ಹಣ ಕೊಟ್ಟ ನಿರುದ್ಯೋಗಿಗಳು ವಿಳಂಬದ ಬಗ್ಗೆ ಪ್ರಶ್ನಿಸಿದರೆ, ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದರು. ಬಳಿಕ ಸಂಪರ್ಕ ಕಡಿದುಕೊಂಡು ವಂಚಿಸುತ್ತಿದ್ದರು. ಎನ್ನಲಾಗಿದೆ.

See also  ಪುತ್ತೂರು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget