ಕ್ರೀಡೆ/ಸಿನಿಮಾಬೆಂಗಳೂರುವೈರಲ್ ನ್ಯೂಸ್

ಬೆಂಗಳೂರು ಕಂಬಳದಲ್ಲಿ ಮಿಂಚಿದ ಸಿನಿ ತಾರೆಯರು, ಯಾರೆಲ್ಲ ಬಂದಿದ್ರು..? ಇಲ್ಲಿದೆ ವಿವರ

152

ನ್ಯೂಸ್ ನಾಟೌಟ್: ಚೊಚ್ಚಲ ಬಾರಿಗೆ ನಡೆದ ಬೆಂಗಳೂರು ಕಂಬಳಕ್ಕೆ(Bengaluru Kambala) ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಎರಡು ದಿನಗಳ ಕಂಬಳದಲ್ಲಿ ಲಕ್ಷಾಂತರ ಜನರು ಕರಾವಳಿಯ ಕಂಬಳವನ್ನ ಕಣ್ತುಂಬಿಕೊಂಡಿದ್ದಾರೆ. ಈ ಬೆಂಗಳೂರಿನ ಕಂಬಳಕ್ಕೆ ಮತ್ತಷ್ಟು ಕಳೆ ತುಂಬಲು ಚಿತ್ರರಂಗದ ನಟ-ನಟಿಯರು ಕೂಡ ಭಾಗಿಯಾಗಿದ್ದು ಕಾರ್ಯಕ್ರಮ ಮತ್ತಷ್ಟು ರಂಗೇರಿದೆ.

ಇಂದಿನ ಕಂಬಳಕ್ಕೆ ಸ್ಯಾಂಡಲ್‌ವುಡ್, ಬಾಲಿವುಡ್ ತಾರೆಯರು ಸೇರಿದಂತೆ ಹಲವು ಗಣ್ಯರು ಕಂಬಳದ ಮೆರುಗನ್ನ ಮತ್ತಷ್ಟು ಹೆಚ್ಚಿಸಿದ್ರು. ರಕ್ಷಿತ್ ಶೆಟ್ಟಿ(Rakshit Shetty), ಉಪೇಂದ್ರ, ಪೂಜಾ ಹೆಗ್ಡೆ(Pooja Hegde), ರಮೇಶ್ ಅರವಿಂದ್, ಮುಖ್ಯಮಂತ್ರಿ ಚಂದ್ರು, ಬೃಂದಾ ಆಚಾರ್ಯ ಕರಾವಳಿಯ ಕ್ರೀಡೆ ಕಣ್ತುಂಬಿಕೊಂಡರು.

ಇಂದು ಬೆಳಿಗ್ಗೆಯಿಂದಲೇ ಅರಮನೆ ಮೈದಾನಕ್ಕೆ ಬಂದ ಲಕ್ಷಾಂತರ ಜನರು ಕಂಬಳವನ್ನ ಕಣ್ತುಂಬಿಕೊಂಡರು. ಹಗ್ಗದ ಹಿರಿಯ, ಹಗ್ಗದ ಕಿರಿಯ, ಕೆನೆಹಲಗೆ, ಅಡ್ಡ ಪಲಾಯಿ ಹೀಗೆ ಒಂದರ ಹಿಂದೆ ಒಂದರAತೆ ಸ್ಪರ್ಧೆ ನಡೀತಿದ್ರೆ ,ನೆರೆದಿದ್ದ ಜನರು ತಮ್ಮ ಶಿಳ್ಳೆ, ಚಪ್ಪಾಳೆ ಮೂಲಕ ಹುರಿದುಂಬಿಸಿದ್ರು.

ರಾಜ, ಮಹಾರಾಜ ಕರೆಯಲ್ಲಿ ಕೋಣಗಳ ಜೋಡಿ ಓಟದ ಮೂಲಕ ಗಮನಸೆಳೆದ್ರೆ, ಅತ್ತ ಸಾಂಸ್ಕೃತಿಕ ವೇದಿಕೆಯಲ್ಲಿ ವಿವಿಧ ನೃತ್ಯತಂಡಗಳು ಜನರ ಮನತಣಿಸಿದ್ದವು. ವೀಕೆಂಡ್ ಹಿನ್ನೆಲೆ ಬೆಂಗಳೂರಿನಲ್ಲಿ ನೆಲಸಿರೋ ಕರಾವಳಿಯ ಜನರು ಮಾತ್ರವಲ್ಲದೇ ಸಿಲಿಕಾನ್ ಸಿಟಿ ಜನರು ಕೂಡ ಕಂಬಳ ಕಂಡು ಫುಲ್ ಖುಷ್ ಆಗಿದ್ದಾರೆ.

See also  ಸಿಸಿ ಕ್ಯಾಮರಾಗೆ ಸ್ಪ್ರೇ ಮಾಡಿ ATMನಿಂದ 30 ಲಕ್ಷ ರೂ. ಹಣ ದೋಚಿದ ಕಳ್ಳರು..! ಗ್ಯಾಸ್ ಕಟರ್ ಮೂಲಕ ಎಟಿಎಂ ಮಷಿನ್ ತುಂಡರಿಸಿದ ಕದೀಮರು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget