ಬೆಂಗಳೂರು

ಬೆಂಗಳೂರಿನಲ್ಲಿ ತರಬೇತಿ ಕಾರ್ಯಾಗಾರಕ್ಕೆ ಗೂನಡ್ಕದ ಸಜ್ಜನ ಪ್ರತಿಷ್ಠಾನ ಸಿದ್ಧತೆ, ಡಾ.ಉಮ್ಮರ್ ಬೀಜದಕಟ್ಟೆ ಶ್ರಮಕ್ಕೆ ಮತ್ತೊಂದು ಗರಿ

147

ನ್ಯೂಸ್ ನಾಟೌಟ್: ಸದಾ ಕ್ರಿಯಾಶೀಲರಾಗಿರುವ ಡಾ.ಉಮ್ಮರ್ ಬೀಜದಕಟ್ಟೆಯವರ ಶ್ರಮಕ್ಕೆ ಮತ್ತೊಂದು ಗರಿ ಸೇರ್ಪಡೆಗೊಳ್ಳುತ್ತಿದೆ. ಫೆ.24ರಂದು ಬೆಂಗಳೂರಿನಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ‘ಆಂತರಿಕ ವಿಚಾರಣೆ ಮತ್ತು ಶಿಸ್ತು ಕ್ರಮ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದೆ.

ವೈಟ್ ಫೀಲ್ಡ್ ಕೈಗಾರಿಕಾ ವಲಯ ಮಹದೇವಪುರ ವ್ಯಾಪ್ತಿಯಲ್ಲಿ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಸಸ್ಮೋಸ್ ಗ್ರೂಪ್ ಆಫ್ ಕಂಪನೀಸ್ ಮಾನವ ಸಂಪನ್ಮೂಲ ನಿರ್ದೇಶಕ ರಾಜಶೇಖರ ರೈ, ಬೆಂಗಳೂರಿನ ಲಗುನ ಕ್ಲೋತಿಂಗ್ ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸದಾಶಿವ, ಬೆಂಗಳೂರಿನ ಎನ್ನೋವಿ ಮೊಬಿಲಿಟಿ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ವಾಸು ಎಂ ಹಾಗೂ ಬೆಂಗಳೂರಿನ ಪೀಪಲ್ & ಕಲ್ಚರ್, ವ್ಯಪಿ ಲೆಕ್ಸ್ ಟೆಕ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಕಲಾ ಬೋಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಾಗಾರದಲ್ಲಿ ವಿವಿಧ ಸಂಸ್ಥೆಗಳಿಂದ 50ಕ್ಕೂ ಹೆಚ್ಚು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಎ ಪಾರ್ಟ್ನರ್ ನ ಖ್ಯಾತ ಹಿರಿಯ ವಕೀಲರು, ಸಜ್ಜನ ಕನ್ನಡ ನಾಡು-ನುಡಿ ವಿಭಾಗದ ರಾಜ್ಯ ಸಂಚಾಲಕರು ಹಾಗೂ ಖ್ಯಾತ ತರಬೇತುದಾರ ಮಂಜುನಾಥ ಬಿ, ಐಮ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಹೆಡ್ – ಹೆಚ್ ಆರ್ & ಐ ಆರ್ ಆಗಿರುವ ವಿನಯ್ ಎಂ ಎಸ್ ತರಬೇತಿ ನೀಡಲಿದ್ದಾರೆ.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ಉಮ್ಮರ್ ಬೀಜದಕಟ್ಟೆಯವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಹಿರಿಯ ಅಧಿಕಾರಿ ಮೋಹನ್ ಕೋಲಾರ ನೆರವೇರಿಸಲಿದ್ದಾರೆ.

See also  ಬಸ್‌ ನಿಂದ ಇಳಿಯುವಾಗ ಜಾರಿ ಬಿದ್ದ ಕಂಡಕ್ಟರ್‌..! ಚಕ್ರಕ್ಕೆ ಸಿಲುಕಿ ಪಾದವೇ ಕಟ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget