ಕರಾವಳಿಮಂಗಳೂರುರಾಜಕೀಯರಾಜ್ಯಸುಳ್ಯ

‘ಜನರಿಗೆ ಉಚಿತ…ಉಚಿತ ಅಂತ ಕೊಟ್ಟು ಈಗ ಬೆಲೆ ಏರಿಕೆಯನ್ನು ಖಚಿತ ಮಾಡಿದ್ದಾರೆ’, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಶಾಸಕಿ ಭಾಗೀರಥಿ ಮುರುಳ್ಯ

168

ನ್ಯೂಸ್ ನಾಟೌಟ್: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ್ದು ಜನ ವಿರೋಧಿ ಗ್ಯಾರಂಟಿ ಸರ್ಕಾರ ಅನ್ನೋದು ಖಚಿತವಾಗಿದೆ. ಉಚಿತ ..ಉಚಿತಗಳನ್ನು ಸಿಎಂ ಸಿದ್ದು ನೇತೃತ್ವದ ರಾಜ್ಯ ಸರ್ಕಾರ ನೀಡುತ್ತಲೇ ಬಂತು. ಈಗ ಅವರ ಬೊಕ್ಕಸದಲ್ಲಿ ಹಣವಿಲ್ಲ. ಬಡವರ ಸರ್ಕಾರ ಎಂದು ಪ್ರಚಾರ ಪಡೆದುಕೊಂಡು ಅಧಿಕಾರಕ್ಕೆ ಏರಿದವರು ಈಗ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಿದ್ದಾರೆ. ಬಡ, ಮಧ್ಯಮ ವರ್ಗದ ಜನರ ಬದುಕಿಗೆ ಬರೆ ಎಳೆದಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆಗಳ ಸುರಿಮಳೆ ಸುರಿಸಿದ ಭಾಗೀರಥಿ ಮುರುಳ್ಯ ಅವರು, “ಕಾಂಗ್ರೆಸ್ ಹಿಂದಿನ ಬಾಗಿಲಿನಿಂದ ಕದ್ದು ಮುಂದಿನ ಬಾಗಿಲಿನಿಂದ ಉಚಿತವಾಗಿ ಕೊಡುವ ನಾಟಕ ಆಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲುಂಡ ಹತಾಶೆಯಲ್ಲಿದೆ. ಇದೀಗ ತೈಲ ಬೆಲೆ ಏರಿಸಿ ಜನರ ಕಿಸೆಗೆ ಬರೆ ಎಳೆದಿದೆ. ಈ ಸರ್ಕಾರದ ವಿರುದ್ಧ ಜನ ಸಿಡಿದೇಳುತ್ತಾರೆ. ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಿ ತಕ್ಕ ಉತ್ತರವನ್ನು ನೀಡಲಿದ್ದಾರೆ, ಅದಕ್ಕೂ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಬೆಲೆ ಏರಿಕೆಯನ್ನು ಇಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Click 👇

https://newsnotout.com/2024/06/darshan-and-gang-issue-gold-kannada-news
https://newsnotout.com/2024/06/hair-cutting-shop-owner-misbehaviour-police-issue
https://newsnotout.com/2024/06/viral-news-company-interview-kannada-news
https://newsnotout.com/2024/06/darshan-and-gang-issue-accued-and-his-father-nomore
See also  ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ, ಹಲವು ಮಾದಕ ವಸ್ತುಗಳು ಪತ್ತೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget