ನ್ಯೂಸ್ ನಾಟೌಟ್: ಮೇ 20ರಂದು ಉತ್ತರ ಪ್ರದೇಶದ ಮೀರತ್ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಅಹ್ಮದ್ ನಗರದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಬೈಕ್ ನಲ್ಲಿ ಬಂದ ಯುವಕನೊಬ್ಬ ರಸ್ತೆ ಮಧ್ಯದಲ್ಲಿ ಮುತ್ತಿಕ್ಕಿದ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಇಡೀ ವಿಷಯ ಈಗ ಬೆಳಕಿಗೆ ಬಂದಿದೆ.
ಮಹಿಳೆ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಮುಂಭಾಗದಿಂದ ಬಂದ ಯುವಕನೊಬ್ಬ ಇದ್ದಕ್ಕಿದ್ದಂತೆ ಮಹಿಳೆಗೆ ಬಲವಂತವಾಗಿ ಮುತ್ತಿಕ್ಕಿ ಪರಾರಿಯಾಗಿದ್ದನು ವಿಡಿಯೋದಲ್ಲಿ ಕಾಣಬಹುದು. ಈ ಕೃತ್ಯದಿಂದ ಮಹಿಳೆ ಆಘಾತಕ್ಕೊಳಗಾಗಿ ಯುವಕನನ್ನು ಹಿಡಿಯಲು ಪ್ರಯತ್ನಿಸುತ್ತಾಳೆ. ಆದರೆ ಸಾಧ್ಯವಾಗಲಿಲ್ಲ. ಇಡೀ ಘಟನೆಯು ಹತ್ತಿರದ ಮನೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ.
ವಿಡಿಯೋ ವೈರಲ್ ಆದ ನಂತರ, ಮೀರತ್ ಪೊಲೀಸರು ತಕ್ಷಣ ಕ್ರಮ ಕೈಗೊಂಡರು. ಅಹ್ಮದ್ ನಗರ ಪ್ರದೇಶದಲ್ಲಿ ಅಳವಡಿಸಲಾಗಿರುವ ಹಲವಾರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ, ಪೊಲೀಸರು ಆರೋಪಿಯ ಮನೆ ಪತ್ತೆ ಮಾಡಿ ಆರೋಪಿ ಸೊಹೈಲ್ ನನ್ನು ವಶಕ್ಕೆ ಪಡೆದಿದ್ದಾರೆ.
उत्तर प्रदेश के मेरठ में एक मनचला युवक गली से गुजर रही महिला को Kiss करके भाग गया !!
इसके जवाब में महिला ने गालियों की धुआंधार पारी खेली है, कृपया EP लगाकर सुनें। pic.twitter.com/mKvkQtf2z3
— Sachin Gupta (@SachinGuptaUP) May 26, 2025
ये सुहेल है.
मेरठ की एक गली में महिला जा रही थी. ये बाइक से आया और महिला को kiss करके चला गया.
फिर यूपी पुलिस ने सुहेल को पकड़ा और बेहद प्यार से समझाया कि अच्छे लड़के ऐसा नहीं करते हैं.
अब सुहेल कह रहा है- गलती हो गई, अब नहीं होगी. pic.twitter.com/iH3hXNmIlY
— Ranvijay Singh (@ranvijaylive) May 26, 2025
ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆಯ ಸಮಯದಲ್ಲಿ, ಆರೋಪಿಯು ಆ ಮಹಿಳೆ ಯಾರು ಅಂತ ಗೊತ್ತಿಲ್ಲ. ಇದನ್ನು ಕೇವಲ ‘ತಮಾಷೆ’ಗಾಗಿ ಮಾಡಿದ್ದೇನೆ ಎಂದು ಹೇಳಿದ್ದಾನೆ. ಪೊಲೀಸರು ಅವನನ್ನು ಕಟ್ಟುನಿಟ್ಟಾಗಿ ಪ್ರಶ್ನಿಸಿದಾಗ, ಅವನು ತನ್ನ ಕಿವಿಗಳನ್ನು ಹಿಡಿದುಕೊಂಡು ಕ್ಷಮೆಯಾಚಿಸಿ, ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದು ಹೇಳಿದ್ದಾನೆ. ಆರೋಪಿಯ ವಿರುದ್ಧ ಗಂಭೀರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ ಆಯ್ಕೆ, ಸಂಭಾವನೆ ಪಡೆಯದೆ ಒಪ್ಪಿಕೊಂಡ ಖ್ಯಾತ ಮಾಜಿ ಕ್ರಿಕೆಟಿಗ..!
ವಾಟ್ಸ್ ಆ್ಯಪ್ ಚಾಟ್ ಗಳನ್ನು ಸಾಕ್ಷ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದ ಕೋರ್ಟ್..! 12 ಕೊಲೆ ಆರೋಪಿಗಳು ಖುಲಾಸೆ..!