ಕ್ರೀಡೆ/ಸಿನಿಮಾಕ್ರೈಂವೈರಲ್ ನ್ಯೂಸ್

‘ಬಿಗ್ ಬಾಸ್’ ಗೆ ಮತ್ತೆ ಎಂಟ್ರಿ ಕೊಟ್ಟ ವರ್ತೂರು ಸಂತೋಷ್..? ಮುಂದೆ ಕಾನೂನು ಪ್ರಕ್ರಿಯೆಗಳೇನಿದೆ?

187

ನ್ಯೂಸ್ ನಾಟೌಟ್ : ಕನ್ನಡ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಶುಕ್ರವಾರದಂದು ನಗರದ ನ್ಯಾಯಾಲಯವು ಹುಲಿ ಪಂಜದ ಪೆಂಡೆಂಟ್ ಪ್ರಕರಣದಲ್ಲಿ ಜಾಮೀನು ನೀಡಿದಾಗ ಅವರಿಗೆ ಮಹತ್ವದ ವಿಶ್ರಾಂತಿ ಸಿಕ್ಕಿತು, ಅವರ ಬಂಧನದಿಂದ ಪರಿಹಾರ ಸಿಕ್ಕಿತು. ಜಾಮೀನು ನೀಡುವಂತೆ ನ್ಯಾಯಾಲಯ ಅವರಿಗೆ ಮನವಿ ಮಾಡಿದೆ.

ಆತನ ಜಾಮೀನಿಗೆ ಅರಣ್ಯ ಇಲಾಖೆ ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿದ್ದು, ಸಾಕ್ಷ್ಯಾಧಾರಗಳನ್ನು ಹಾಳುಗೆಡವಬಹುದೆಂಬ ಆತಂಕ ವ್ಯಕ್ತಪಡಿಸಿತ್ತು. ವರ್ತೂರು ಸಂತೋಷ್ (Varthur Santhosh) ಬಿಗ್ ಬಾಸ್ (Bigg Boss Kannada) ಮನೆ ಪ್ರವೇಶ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿತ್ತು, ಈಗ ಅದಕ್ಕೆ ಉತ್ತರ ಸಿಕ್ಕಿದೆ.

ಜೈಲಿನಿಂದ ಬಿಡುಗಡೆಯಾಗಿ 48 ಗಂಟೆ ಸಮೀಪಿಸಿದರೂ ಬಿಗ್ ಬಾಸ್ ಗೆ ಮತ್ತೆ ಪ್ರವೇಶ ಪಡೆದಿರಲಿಲ್ಲ. ಕೊನೆಗೂ ಬಿಗ್ ಬಾಸ್ ಮನೆಗೆ ವರ್ತುರ್ ಸಂತೋಷ್ ಪ್ರವೇಶ ಮಾಡಿದ್ದಾರೆ.

ಜಾಮೀನು ಸಿಕ್ಕು ಜೈಲಿನಿಂದ ಬಂದ ನಂತರ ಮಾಧ್ಯಮದವರಿಂದ ತಪ್ಪಿಸಿಕೊಂಡು ರಾತ್ರೋರಾತ್ರಿ ಹೋದವರು ಯಾಕೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿಲ್ಲ ಎನ್ನುವ ಪ್ರಶ್ನೆ ಎಲ್ಲರದ್ದಾಗಿತ್ತು. ಮುಂದೆ ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿವೆ ಎನ್ನಲಾಗಿದೆ.

ಶುಕ್ರವಾರ ರಾತ್ರಿಯೇ ಬಿಗ್ ಬಾಸ್ ಟೀಮ್ ಸಂತೋಷ್ ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟಿದ್ದು, ಮೆಡಿಕಲ್ ಟೆಸ್ಟ್ ಕೂಡ ಮಾಡಿಸಲಾಗಿತ್ತು. ಮತ್ತೆ ಬಿಗ್ ಬಾಸ್ ಮನೆಗೆ ಕಳುಹಿಸುತ್ತಿರುವ ಕುರಿತು ಅವರ ಕುಟುಂಬಕ್ಕೂ ಮಾಹಿತಿ ನೀಡಿತ್ತು. ಆದರೆ, ಜಾಮೀನಿನಲ್ಲಿರುವ ಅಂಶಗಳ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ ಎನ್ನುವ ಮಾಹಿತಿ ಸಿಕ್ಕಿತ್ತು. ಜಾಮೀನು ಮೇಲೆ ಸಂತೋಷ್ ಜೈಲಿನಿಂದ ಹೊರ ಬಂದಿರುವ ಕಾರಣದಿಂದಾಗಿ ಕಾನೂನು ತಜ್ಞರ ಸಲಹೆ ಪಡೆದುಕೊಳ್ಳಲಾಗುತ್ತಿತ್ತು.

ಎಲ್ಲ ಅಡೆತಡೆಗಳನ್ನು ದಾಟಿಕೊಂಡು ಇಂದು ಮಧ್ಯಾಹ್ನದಿಂದಲೇ ಅಧಿಕೃತವಾಗಿ ವರ್ತೂರ್ ಸಂತೋಷ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

See also  ಲೇಡಿ ಸಬ್ ಇನ್ಸ್‌ ಪೆಕ್ಟರ್ ಬರೆದ ರಜಾ ಅರ್ಜಿಯಲ್ಲಿ ಸಿಕ್ಕಾಪಟ್ಟೆ ಸ್ಪೆಲ್ಲಿಂಗ್​ ಮಿಸ್ಟೆಕ್ ಕಂಡು ಅಧಿಕಾರಿಗಳಿಗೆ ಶಾಕ್..! ತನಿಖೆಯ ಬಳಿಕ ಆಕೆ ಅರೆಸ್ಟ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget