ಕರಾವಳಿಕ್ರೈಂ

ಮಂಗಳೂರು: ಬೈಕ್ ಸವಾರನಿಗೆ ದಿಢೀರ್ ಅಡ್ಡ ಬಂದ ಶ್ವಾನ..! ಡಿವೈಡರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ನ್ಯೂಸ್‌ ನಾಟೌಟ್‌: ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ರಸ್ತೆಯಲ್ಲಿ ನಾಯಿ ಅಡ್ಡ ಬಂದು ನಿಯಂತ್ರಣ ತಪ್ಪಿದ ಬೈಕ್‌ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು
ಸವಾರ ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಸಮೀಪದ ಶರ್ಬತ್‌ ಕಟ್ಟೆ ಎಂಬಲ್ಲಿ ಸಂಭವಿಸಿದೆ.

ಮೃತ ಬೈಕ್‌ ಸವಾರನನ್ನು ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಎಂದು ಗುರುತಿಸಲಾಗಿದೆ. ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡ ದಾಟಿದೆ. ನಿಯಂತ್ರಣ ತಪ್ಪಿ ಅವರ ಬೈಕ್‌ ನಾಯಿಗೆ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ ಡಿವೈಡರ್‌ಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಅಂಗಾರೆ ಮಲ್ತಿನ ಕೆಲಸ ಶುಕ್ರವಾರ ಮುಟ್ಟ ಮಾತ್ರ: ಸಂತೋಷ್ ಕಾಮತ್ ವ್ಯಂಗ್ಯ

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ನಡುವೆ ಮಾರಾಮಾರಿ..! ಜೈಲಿನೊಳಗಿದ್ದ ಮಾರಾಕಾಸ್ತ್ರ ವಶಕ್ಕೆ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?

ನಿಮ್ಮ ಆಧಾರ್‌ ಕಾರ್ಡ್ ಸ್ವೀಕರಿಸುವ ಮುನ್ನ ಚೆನ್ನಾಗಿ ಪರಿಶೀಲಿಸಿ