ಕೊಡಗು

ಮಡಿಕೇರಿ:ಎರಡು ಬೈಕ್‌ಗಳ ಮಧ್ಯೆ ಭೀಕರ ಅಪಘಾತ,ಚಿಕಿತ್ಸೆ ಫಲಿಸದೇ ಪ್ರಾಣ ಕಳೆದುಕೊಂಡ ಬ್ಯಾಂಕ್ ಉದ್ಯೋಗಿ

ನ್ಯೂಸ್ ನಾಟೌಟ್ : ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್‌ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ವರದಿಯಾಗಿದೆ. ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿಯಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಅಮೃತ(24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಅಮೃತ ಮೂಲತಃ ಕೇರಳದ ಶ್ರೀಶೂರಿನವರು.ಬಹಳ ಸಮಯಗಳಿಂದ ಕೆನರಾ ಬ್ಯಾಂಕ್‌ ಉದ್ಯೋಗಿಯಾಗಿದ್ದರು.ಎರಡೂ ಬೈಕ್‌ಗಳು ರಭಸವಾಗಿ ಡಿಕ್ಕಿಯಾಗಿರುವ ಪರಿಣಾಮ ಅಮೃತ ತೀವ್ರ ಗಾಯಗೊಂಡಿದ್ದರೆಂದು ತಿಳಿದು ಬಂದಿದೆ.ಕೂಡಲೇ ಅವರನ್ನುಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತು.

ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅದಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಡಿಕೇರಿ:ಕಾರುಗಳೆರಡರ ಮಧ್ಯೆ ಭೀಕರ ಅಪಘಾತ,ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಜೀಪು ಮತ್ತು ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

‘ನನ್ನನ್ನು ಪ್ರೀತಿಸಿ ಮದುವೆಯಾಗೋದಾಗಿ ಹೇಳಿ ನಂಗೆ ಕೈ ಕೊಟ್ಟಿದ್ದಾನೆ’,73ರ ವೃದ್ಧನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 63ರ ವೃದ್ದೆ..! :ಅಜ್ಜಿಗೆ ಅಜ್ಜ ಕೈ ಕೊಟ್ಟಿದ್ದಾದರೂ ಏನಕ್ಕೆ ?