ಕರಾವಳಿಕ್ರೈಂ

ಧರ್ಮಸ್ಥಳ:ಕಾರು-ಬೈಕ್ ಡಿಕ್ಕಿ,ಬೈಕ್ ಸವಾರ ಗಂಭಿರ ಗಾಯ

269

ನ್ಯೂಸ್ ನಾಟೌಟ್ : ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿ ಭೀಕರ ಅಪಘಾತ ಸಂಭವಿಸಿದೆ.ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಏನಿದು ಘಟನೆ?

ಅಪಘಾತದ ರಭಸಕ್ಕೆ ಬೈಕ್ ಜಖಂಗೊಂಡಿದೆ.ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಧರ್ಮಸ್ಥಳದ ನಿವಾಸಿ.ನಿತೇಶ್(೨೮)ಗಂಭೀರ ಗಾಯಗೊಂಡ ವ್ಯಕ್ತಿ.ಘಟನಾ ಸ್ಥಳಕ್ಕೆ ತಕ್ಷಣವೇ ಸ್ಥಳೀಯರು ಬಂದು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

See also  ಸೌಜನ್ಯ ಸಾವಿನ ನ್ಯಾಯಕ್ಕಾಗಿ ಸುಳ್ಯದಲ್ಲೂ ತಲೆಯೆತ್ತಿದ ಬ್ಯಾನರ್ , ತೆರೆಮರೆಯಲ್ಲಿ ನಡೆಯುತ್ತಿದೆಯಾ ಹೋರಾಟದ ತಯಾರಿ?
  Ad Widget   Ad Widget     Ad Widget   Ad Widget   Ad Widget   Ad Widget