ಕ್ರೈಂಬೆಂಗಳೂರುವೈರಲ್ ನ್ಯೂಸ್

ಬೈಕ್ ಗೆ ಗುದ್ದಿದರೂ ಮಾನವೀಯತೆ ತೊರಲಿಲ್ಲವೇ ಕಾಮಿಡಿ ಸ್ಟಾರ್ ಚಂದ್ರಪ್ರಭ! ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಈ ಕಲಾವಿದನ ಮೇಲೆ ‘ಹಿಟ್ ಆ್ಯಂಡ್ ರನ್ ಕೇಸ್’!

177

ನ್ಯೂಸ್ ನಾಟೌಟ್: ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಂದ್ರಪ್ರಭ ಜಿ. ಈಗ ವಿವಾದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್​ನಲ್ಲಿ ಚಂದ್ರಪ್ರಭಗೆ ಸೇರಿದ ಕಾರು ಬಳಕೆ ಆಗಿದೆ ಎನ್ನಲಾಗಿದ್ದು. ವೃತ್ತಿಯಲ್ಲಿ ಕಲಾವಿದ ಆಗಿರುವ ಚಂದ್ರಪ್ರಭ ಮಾನವೀಯತೆ ತೋರಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದ ಅಪ* ಘಾತದಲ್ಲಿ ಬೈಕ್ ಒಂದಕ್ಕೆ ಕಾರು ಗುದ್ದಿದೆ ಮತ್ತು ಬೈ ಸವಾರನಿಗೆ ಗಾಯಗಳಾದರೂ ನೋಡದೆ ಕಾರ್ ಚಾಲಕ ಪರಾರಿಯಾಗಿದ್ದಾನೆ. ಆದರೆ ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಇದು ಚಂದ್ರಪ್ರಭ ಕಾರು ಎನ್ನಲಾಗಿದೆ. ಅವರೇ ಕಾರು ಚಲಾಯಿಸುತ್ತಿದ್ದರೇ ಎಂಬ ಬಗ್ಗೆ ಸ್ಪಷ್ಟತೆ ದೊರೆತಿಲ್ಲ.

ಚಿಕ್ಕಮಗಳೂರು ನಗರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್​​ನಲ್ಲಿ ಬರುತ್ತಿದ್ದ ವೇಳೆ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ.

ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆಯುವ ಸಂದರ್ಭದಲ್ಲಿ ಚಂದ್ರಪ್ರಭ ಅವರೇ ಕಾರು ಓಡಿಸುತ್ತಿದ್ದರೋ ಅಥವಾ ಬೇರೆಯವರು ಈ ಕಾರನ್ನು ತೆಗೆದುಕೊಂಡು ಹೋಗಿದ್ದರೋ ಎನ್ನುವ ಮಾಹಿತಿ ದೊರೆತಿಲ್ಲ.

See also  ಸಂಚಾರ ನಿಯಮ ಉಲ್ಲಂಘಿಸಿದ 222 ವಾಹನ ಚಾಲಕರ ಡಿಎಲ್ ರದ್ದು! ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ ಶಿಫಾರಸ್ಸಿನಲ್ಲೇನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget