ಕರಾವಳಿಕ್ರೈಂವೈರಲ್ ನ್ಯೂಸ್

ಕೊಕ್ಕಡ: ಬೈಕ್ ಗಳ ನಡುವೆ ಅಪಘಾತ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು

163

ನ್ಯೂಸ್ ನಾಟೌಟ್: ಫೆ.9 ರಂದು ರಾತ್ರಿ ನೆಲ್ಯಾಡಿ-ಕೊಕ್ಕಡ ರಸ್ತೆಯ ಪುತ್ಯೆ ಸಮೀಪ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.

ದುರ್ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಕ್ರಮವಾಗಿ ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ರಿಂಗ್ ವರ್ಕ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ ಬೆನ್ನಿ ಅವರು ತನ್ನ ಬೈಕ್ ನಲ್ಲಿ ಕೊಕ್ಕಡದಿಂದ ನೆಲ್ಯಾಡಿಗೆ ಬರುತ್ತಿದ್ದಾಗ ವಿರುದ್ಧ ಧಿಕ್ಕಿನಿಂದ ಮಹೇಂದ್ರ ಹಾಗೂ ಮಂಜುನಾಥ ಅನ್ನುವವರು ಮತ್ತೊಂದು ಬೈಕ್ ನಲ್ಲಿ ಬರುತ್ತಿದ್ದರು.

ಈ ವೇಳೆ ಪುತ್ಯೆ ಸಮೀಪ ಮಾಯಿಲಕೋಟೆ ದೈವಸ್ಥಾನಕ್ಕೆ ತಿರುಗುವಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಹಾಡಹಗಲೇ ಮಚ್ಚಿನಿಂದ ಯುವತಿಯನ್ನು ಕೊಂದ ಕಾಲ್ ​ಸೆಂಟರ್ ಉದ್ಯೋಗಿ..! ಪೊಲೀಸರು ಈ ಬಗ್ಗೆ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget