ನ್ಯೂಸ್ ನಾಟೌಟ್: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಎಂಬಲ್ಲಿ ಬುಲೆಟ್ ಬೈಕ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಇದೀಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕೇರಳ ನೋಂದಣಿಯ ಬೈಕ್ ಎಂದು ತಿಳಿದು ಬಂದಿದೆ. ಮೃತ ಯುವಕನನ್ನು ಕಾಸರಗೋಡಿನ ಅಶ್ರಫ್ ಎಂದು ಗುರುತಿಸಲಾಗಿದೆ.
ಅಪಘಾತವಾದ ಸಂದರ್ಭ ಆಂಬ್ಯುಲೆನ್ಸ್ ನಲ್ಲಿ ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಗಾಯಾಳು ಬದುಕುಳಿಯಲಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.