ರಾಜಕೀಯವೈರಲ್ ನ್ಯೂಸ್

ರಾಜ್ಯದ ಬಿಜೆಪಿ ಮೇಲೆ ಹೈಕಮಾಂಡ್ ಬೇಸರ ಆಗಿರೋದು ನಿಜ ಎಂದದ್ದೇಕೆ ಈಶ್ವರಪ್ಪ..? ಶೆಟ್ಟರ್ ಮತ್ತೆ ಬಿಜೆಪಿಗೆ ಬರೋ ಬಗ್ಗೆ ಮಾಜಿ ಸಚಿವ ಸುಳಿವು ನೀಡಿದ್ರಾ..?

ನ್ಯೂಸ್ ನಾಟೌಟ್ : ಕರ್ನಾಟಕದಲ್ಲಿ ಬಿಜೆಪಿ ಶಕ್ತಿಶಾಲಿಯಾಗಿದೆ. ಆದರೆ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ಮೇಲೆ ಬೇಸರ ಇರುವುದು ನಿಜ. ರಾಜ್ಯ ಬಿಜೆಪಿ ಸ್ಥಿತಿಗತಿ ಬಗ್ಗೆ ರಾಷ್ಟ್ರೀಯ ಮುಖಂಡರು ಬೇಸರಗೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಆದರೆ,ಹೈಕಮಾಂಡ್ ಗೆ ರಾಜ್ಯದ ಮೇಲೆ ನಿಯಂತ್ರಣ ಇಲ್ಲ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಕೆಲವರಲ್ಲಿ ಅಸಮಾಧಾನ ಇರುವುದೂ ನಿಜ.

ಆದರೆ ಅವರೆಲ್ಲರು ಪಕ್ಷ ನಿಷ್ಠರೇ ಹೊರತು ಬಂಡಾಯಗಾರರಲ್ಲ. ವೈಯಕ್ತಿಕ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದಾರೆಯೇ ಹೊರತು ಪಕ್ಷದ ಕುರಿತಲ್ಲ. ಹೀಗಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಮುಂದಿನ ದಿನಗಳಲ್ಲಿ ಹೈಕಮಾಂಡ್ ನಾಯಕರು ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದಿದ್ದಾರೆ.

ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್‌ನಲ್ಲಿನ ಸಂಸ್ಕೃತಿ, ಸಚಿವ ಜಮೀರ್ ಅಹಮದ್ ಧೋರಣೆ ಹೊಂದಿಕೊಳ್ಳಲ್ಲ. ಅವರು ಬಿಜೆಪಿಗೆ ಮರಳಿ ಬರುವುದು ಖಂಡಿತ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು ಎನ್ನಲಾಗಿದೆ.

ಜಗದೀಶ್ ಶೆಟ್ಟರ್‌ರದು ಸುಸಂಸ್ಕೃತ ‌ಕುಟುಂಬ ಮಾತ್ರವಲ್ಲದೇ, ಹಿಂದೂ ಸಮಾಜ ರಕ್ತಗತ ಮಾಡಿಕೊಂಡ‌ ಕುಟುಂಬ. ಜಗದೀಶ್ ಶೆಟ್ಟರ್ ತಂದೆ ಹುಬ್ಬಳ್ಳಿ ‌ಮೇಯರ್ ಮತ್ತು ಶಾಸಕರಾಗಿದ್ದರು. ಆದರೆ, ಕೆಲ ಕಾರಣಗಳಿಂದ ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿದ್ದಾರೆ. ಖಂಡಿತ ಅವರು ಬಿಜೆಪಿಗೆ ಹಿಂದಿರುಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ,. ರಾಜ್ಯ ರಾಜಕೀಯದಲ್ಲಿ ರಿವರ್ಸ್ ಆಪರೇಷನ್ ನಡೆಯುತ್ತಿದೆಯಾ ಎಂಬ ಬಗ್ಗೆ ಅನುಮಾನ ಮೂಡಿಸಿದೆ.

Related posts

ದೇವಸ್ಥಾನದಲ್ಲಿ ನಮಾಜ್ ಮಾಡಿದ ತಾಯಿ, ಮಗಳನ್ನು ಬಂಧಿಸಿದ್ದೇಕೆ ಪೊಲೀಸರು? ಮಹಿಳೆ ಮತ್ತು ಮಗಳಿಗೆ ಧರ್ಮಗುರು ಹೇಳಿದ್ದ ರಹಸ್ಯವೇನು? ಇಲ್ಲಿದೆ ವೈರಲ್ ವಿಡಿಯೋ

ಮಹಿಳಾ ಹಾಸ್ಟೆಲ್ ​ನಲ್ಲಿದ್ದ 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥ..! ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರಿಗೇನಾಯ್ತು..?

ಮರುಭೂಮಿಯಲ್ಲಿ ಬೋರ್‌ ವೆಲ್‌ ಕೊರೆಯುತ್ತಿದ್ದ ವೇಳೆ ಅಚಾನಕ್ಕಾಗಿ ಸೃಷ್ಟಿಯಾದ ನದಿ..! ಪುರಾಣದ ಸರಸ್ವತಿ ನದಿಯ ಮರು ಉಗಮ ಎನ್ನುತ್ತಿದ್ದಾರೆ ಜನ..! ಇಲ್ಲಿದೆ ವಿಡಿಯೋ