ಕರಾವಳಿ

ನಳೀನ್, ಸುನಿಲ್ ಕುಮಾರ್‌ಗೆ ಕಾರ್ಯಕರ್ತರಿಂದ ಘೇರಾವ್

435

ನ್ಯೂಸ್ ನಾಟೌಟ್: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ ಗೆ ಬೆಳ್ಳಾರೆಯಲ್ಲಿ ಪಕ್ಷದ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ನಡೆದಿದೆ.

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ಭೀಕರ ಹತ್ಯೆಗೈದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಕಾರ್ಯಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ನ್ಯಾಯಕೊಡಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಸದ್ಯ ಪ್ರವೀಣ್ ಪಾರ್ಥೀವ ಶರೀರ ಅವರ ಮನೆ ನೆಟ್ಟಾರ್ ನತ್ತ ತೆರಳಿದ್ದರೆ ಇತ್ತ ಬೆಳ್ಳಾರೆಯಲ್ಲಿ ಕಾರ್ಯಕರ್ತರು ತಮ್ಮ ಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಾರ್ಯಕರ್ತರನ್ನು ಸಮಾಧಾನ ಪಡಿಸುವ ಪ್ರಯತ್ನ ನಡೆಸಿದರು. ಇತ್ತ ನಳೀನ್ ಹಾಗೂ ಸುನಿಲ್ ಕೈ ಕಟ್ಟಿ ಮೌನಕ್ಕೆ ಶರಣಾದರು. ಬೆಳಗ್ಗಿನಿಂದ ಮೆರವಣಿಗೆಯಕಲ್ಲಿ ಶಾಸಕ ಹರೀಶ್ ಒಬ್ಬರನ್ನು ಹೊರತುಪಡಿಸಿದರೆ ಬೇರೆ ಯಾವುದೇ ಬಿಜೆಪಿ ಜನನಾಯಕರು ಬಾರದೆ ಇರುವುದು ಕಾರ್ಯಕರ್ತರ ಭಾರಿ ಅಸಮಾಧಾನಕ್ಕೆ ಕಾರಣವಾಗಿತ್ತು.

See also  ಜ.5 ರಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಮೇಳ
  Ad Widget   Ad Widget   Ad Widget   Ad Widget   Ad Widget   Ad Widget   Ad Widget