ಕರಾವಳಿಪುತ್ತೂರುರಾಜಕೀಯ

ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು

196

ನ್ಯೂಸ್ ನಾಟೌಟ್ ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ತಾರಾ ಪ್ರಚಾರಕರನ್ನು ಬಳಸಿಕೊಂಡು ಕಾನೂನು ಬಾಹಿರವಾಗಿ ಪ್ರಚಾರ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಏಜೆಂಟ್ ರಾಜೇಶ್ ಬನ್ನೂರ್ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಬಿಜೆಪಿಯ ತಾರಾ ಪ್ರಚಾರಕಾರನ್ನು ಬಳಸಿಕೊಳ್ಳುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪತ್ರಿಕೆಗಳಿಗೂ ಜಾಹೀರಾತು ನೀಡಿದ್ದಾರೆ. ಮೇ 6 ರಂದು ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಲಿದ್ದು, ಅವರನ್ನು ಸ್ವಾಗತಿಸುವ ಜಾಹಿರಾತು ನೀಡಿದ್ದಾರೆ. ಈ ಬಗ್ಗೆ ನಮ್ಮ ಗಮನಕ್ಕೆ ಬಂದಿದ್ದು, ಇದು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣ ಸಂಬಂಧಪಟ್ಟ ಪತ್ರಿಕೆಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡಿ ಕ್ರಮಕೈಗೊಳ್ಳುವಂತೆ ದೂರಿನ ಮೂಲಕ ಆಗ್ರಹಿಸಿದ್ದಾರೆ.

See also  ಸಂಪಾಜೆ: ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಗೇಟಿಗೆ ಗುದ್ದಿದ ಲಾರಿ ಜಖಂ..!ಏನಿದು ಘಟನೆ?
  Ad Widget   Ad Widget   Ad Widget   Ad Widget   Ad Widget   Ad Widget   Ad Widget