ರಾಜಕೀಯವೈರಲ್ ನ್ಯೂಸ್

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ನಾಳೆ ನಾಮಪತ್ರ ಸಲ್ಲಿಕೆ, ಕಾಂಗ್ರೆಸ್ ನವರೂ ನನಗೆ ಬೆಂಬಲ ಕೊಡ್ತಿದ್ದಾರೆ ಎಂದ ಮಾಜಿ ಸಚಿವ

ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ(ಎ.12) ನಾಮಪತ್ರ ಸಲ್ಲಿಸಲಿದ್ದಾರೆ.

“ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ. ನಾಳೆ (ಶುಕ್ರವಾರ) 10 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಮೆರವಣಿಗೆ ನಡೆಸುತ್ತೇನೆ. ಸಾಮಾನ್ಯ ಕಾರ್ಯಕರ್ತ, ಮತದಾರರೇ ನನಗೆ ಸ್ಟಾರ್ ಪ್ರಚಾರಕರು. ನಾನು ಬಿಜೆಪಿ ಶುದ್ದೀಕರಣ ಆಗಬೇಕು ಅಂತಾ ಹೊರಗೆ ಬಂದು ಹೋರಾಟ ಮಾಡ್ತಿದ್ದೇನೆ” ಎಂದು ಹೇಳಿದ್ದಾರೆ. ನಾನು ನಿರೀಕ್ಷೆ ಮಾಡಿರಲಿಲ್ಲ, ಕಾಂಗ್ರೆಸ್ ಕಾರ್ಯಕರ್ತರು ಅನೇಕರು ನೇರವಾಗಿ ಬೆಂಬಲ ಕೊಡ್ತಿದ್ದಾರೆ. ಗೆಲ್ಲಿಸುವ ದಿಕ್ಕಿನಲ್ಲಿ ಪ್ರಯತ್ನ ಮಾಡ್ತೇವೆ ಅಂತಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ನವರು ಬೆಂಬಲ ಕೊಡ್ತಿದ್ದಾರೆ. ಕಾಂಗ್ರೆಸ್ ಕ್ಯಾಂಡಿಡೇಟು ವೀಕ್ ಅದಕ್ಕೆ ನಿಮಗೆ ಬೆಂಬಲ ಕೊಡ್ತೀವಿ ಅಂತಿದ್ದಾರೆ. ನಾಳೆ ಎಲ್ಲರೂ ನಾಮಪತ್ರ ಸಲ್ಲಿಸಲು ಬರುತ್ತಿದ್ದಾರೆ. ಇಷ್ಟರಮಟ್ಟಿಗೆ ಬೆಂಬಲ ಸಿಗುತ್ತದೆ ಅಂತಾ ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

Related posts

ವಿದ್ಯಾರ್ಥಿಗೆ ಕೈವಾರದಿಂದ 100ಕ್ಕೂ ಹೆಚ್ಚು ಬಾರಿ ಚುಚ್ಚಿದ್ದೇಗೆ ಸಹಪಾಠಿಗಳು..? ಅಷ್ಟಕ್ಕೂ 4ನೇ ತರಗತಿ ವಿದ್ಯಾರ್ಥಿ ಮಾಡಿದ್ದೇನು? ಪೋಷಕರು ಹೇಳಿದ್ದೇನು?

ಮೊದಲ ರಾತ್ರಿಯಂದೇ ಹೆಣ್ಣು ಮಗುವಿಗೆ ಜನ್ಮ ನೀಡಿದ ನವವಿವಾಹಿತೆ..! ಮೊದಲ ರಾತ್ರಿಯ ಕನಸಿನಲ್ಲಿ ತೇಲಾಡುತ್ತಿದ ವರನಿಗೆ ಆಘಾತ..!

ಉಡುಪಿ: ಚಾಕುವಿನಿಂದ ಇರಿದು ಪತ್ನಿಯ ಕೊಲೆ, ಟೆರೇಸ್‌ ನಿಂದ ಬಿದ್ದಳು ಎಂದು ಕಥೆ..? ರೀಲ್ಸ್ ನಲ್ಲಿ ಬ್ಯೂಸಿಯಾಗಿದ್ದ ಪತ್ನಿ ಜೊತೆ ಜಗಳ..!