ಕರಾವಳಿ

ಬಿಜೆಪಿ ಮುಖಂಡನ ಬರ್ಬರ ಹತ್ಯೆ

347

ನ್ಯೂಸ್ ನಾಟೌಟ್ :  ಬಿಜೆಪಿ ಮುಖಂಡರೋರ್ವರನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಚುಚ್ಚಿ, ಕಲ್ಲಿನಿಂದ ಜಜ್ಜಿ ಬರ್ಬರ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.ದುಷ್ಕರ್ಮಿಗಳ ದಾಳಿಗೆ ಬಲಿಯಾದವರನ್ನು ಮಲ್ಲಿಕಾರ್ಜುನ (೬೪) ಎಂದು ಗುರುತಿಸಲಾಗಿದೆ.

ಕಲಬುರಗಿಯ ಸೇಡಂ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದಿದೆ ಬೆಳಕಿಗೆ ಬಂದಿದೆ. ಮರ್ಮಾಂಗಕ್ಕೆ ಚಾಕು ಇರಿದು ಹತ್ಯೆ ಮಾಡಲಾಗಿದ್ದು ಕಲ್ಲಿನಿಂದ ಜಚ್ಚಿ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಲ್ಲಿಕಾರ್ಜುನ ಸೇಡಂನಲ್ಲಿರುವ ತಮ್ಮ ಅಂಗಡಿಯಲ್ಲಿ ರಾತ್ರಿ ಮಲಗಿ ಬೆಳಗ್ಗೆ ಮನೆಗೆ ಬರುತ್ತಿದ್ದರು. ಆದರೆ ಸೋಮವಾರ ರಾತ್ರಿ ಅಂಗಡಿಯಲ್ಲಿ ತಂಗಿದ್ದವರು ಬೆಳಗ್ಗೆ ಯಾದರೂ ಮನೆಗೆ ಬಂದಿರಲಿಲ್ಲ. ಈ ವೇಳೆ ಕುಟುಂಬ ಸದಸ್ಯರು ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವಕಾರಣಗಳಿಂದ ಕೊಲೆಯಾಗಿದ್ದು ಇನ್ನೂ ತಿಳಿದುಬಂದಿಲ್ಲ ಎಂದು ಸೇಡಂ ಪೊಲೀಸ್  ತಿಳಿಸಿದ್ದಾರೆ.

See also  ಖಾಸಗಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಕೊಡದಿದ್ದರೆ ಮಹಿಳೆಯರ ಜತೆ ಸೇರಿ ಪ್ರತಿಭಟಿಸುತ್ತೇವೆ: ನಳಿನ್ ಕುಮಾರ್‌ ಕಟೀಲ್‌
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget