ಕರಾವಳಿಬೆಂಗಳೂರುರಾಜಕೀಯ

ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ

222

ನ್ಯೂಸ್‌ ನಾಟೌಟ್‌: ಬಿಜೆಪಿ ವಿಧಾನಸಭಾ ಚುನಾವಣೆಯ ಪ್ರಜಾ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬಿಡುಗಡೆಗೊಳಿಸಿದರು.ಜನರ ಹಿತದೃಷ್ಟಿಯನ್ನಿಕೊಟ್ಟುಕೊಂಡು ಪ್ರಣಾಳಿಕೆ ತಯಾರಿಸಿದ್ದೇವೆ. ಪ್ರಣಾಳಿಕೆ ರಾಜ್ಯ ಸರ್ಕಾರ ನಡೆಯುವ ದಿಕ್ಕನ್ನು ತೋರಿಸುತ್ತದೆ. ಸುಮಾರು 2 ವರ್ಷ ಕೊರೊನಾದಿಂದ ಆರ್ಥಿಕ ಕುಸಿತ ಆಯಿತು. ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಈಗಾಗಲೇ ಬಜೆಟ್​ನಲ್ಲೂ ಕೃಷಿಗೂ ಹೆಚ್ಚು ಆದ್ಯತೆ ನೀಡಿದ್ದೇವೆ. ಸಿರಿಧಾನ್ಯಗಳ ಉತ್ಪಾದನೆ, ಮೀನುಗಾರಿಕೆ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್​​ ಅವರು ಉಪಸ್ಥಿತರಿದ್ದರು.

ಪ್ರತಿ ತಿಂಗಳು 5 ಕೆಜಿ ಅಕ್ಕಿ ಸೇರಿ ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್‌

ಪೋಷಣೆ ಯೋಜನೆಯಡಿ ಬಿಪಿಎಲ್​ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್​ ಹಾಲು

ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ

ಅಟಲ್‌ ಆಹಾರ ಕೇಂದ್ರ ಸ್ಥಾಪನೆ

ಅಪಾರ್ಟ್‌ಮೆಂಟ್‌ ಓನರ್‌ಶಿಪ್‌ ಆ್ಯಕ್ಟ್‌ ತಿದ್ದುಪಡಿ

ಬಿಪಿಎಲ್​ ಕುಟುಂಬಗಳಿಗೆ ಯುಗಾದಿ, ಗಣೇಶ ಮತ್ತು ದೀಪಾವಳಿ ಹಬ್ಬಕ್ಕೆ ಮೂರು ಎಲ್​ಪಿಜಿ ಸಿಲಿಂಡರ್ ಉಚಿತ

ಏಕರೂಪ ನಾಗರಿಕ ಸಂಹಿತೆ ಜಾರಿ ಭರವಸೆ

ಸರ್ವರಿಗೂ ಸೂರು ಯೋಜನೆಯಡಿ ಹತ್ತು ಲಕ್ಷ ವಸತಿ ನಿವೇಶನ

ಒಂದು ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಆರ್ಥಿಕ ನೆರವು ವಿತರಣೆ

ಬಹುಮಹಡಿ ವಸತಿ ಯೋಜನೆಯಡಿ 5 ಲಕ್ಷ ಮನೆ ನಿರ್ಮಾಣ

ಪ್ರತಿ ವಾರ್ಡ್​​ನಲ್ಲಿಯೂ ಅಟಲ್ ಆಹಾರ ಕೇಂದ್ರ ಸ್ಥಾಪನೆ

See also  ಯುವಕನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ,ಮಾಜಿ ಸೈನಿಕನ ಈ ಕೃತ್ಯಕ್ಕೆ ಕಾರಣವಾದರೂ ಏನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget