ಕರಾವಳಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಆಕ್ರೋಶಕ್ಕೆ ಸಿದ್ಧತೆ, ಪ್ರಕರಣ ದಾಖಲು

367

ನ್ಯೂಸ್ ನಾಟೌಟ್ : ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸುವುದಕ್ಕೆ ಮಂಗಳೂರಿನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಎದುರು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸೆ.2 ಕ್ಕೆ ಮಂಗಳೂರಿಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಎಲ್ಲ ಕಡೆ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ರವಾನಿಸಲಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನಡೆಯುತ್ತಿರುವ ಚರ್ಚೆಯ ಆಧಾರದಲ್ಲಿ ಎರಡು ಪ್ರಕರಣಗಳನ್ನು ಮಂಗಳೂರು ಪೊಲೀಸರು ದಾಖಲಿಸಿಕೊಂಡಿದ್ದು ಒಂದು ಪ್ರಕರಣದಲ್ಲಿ ನಳಿನ್ ಕುಮಾರ್ ಅವರ ಫೋಟೋ ವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಲಾಗಿದೆ. ಮತ್ತೊಂದು ಗೊಂದಲ ಉಂಟು ಮಾಡುವ ರೀತಿ ಪೋಸ್ಟ್ ಮಾಡಲಾಗಿದೆ.

ಮೋದಿ ಕಾರ್ಯಕ್ರಮದಲ್ಲಿ ಗೊಂದಲ ನಿರ್ಮಾಣ ಮಾಡಲು ವಾಟ್ಸಪ್ ಗ್ರೂಪ್ ಮಾಡಲಾಗಿದೆ. ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ ಎಂದು ಕಮಿಷನರ್ ಶಶಿಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ಎರಡು ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ಇಬ್ಬರು ಕೂಡ ನಾಪತ್ತೆಯಾಗಿದ್ದಾರೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

See also  ಪುತ್ತೂರು: ನಕಲಿ ದಾಖಲೆ ಸೃಷ್ಟಿಸಿ ಹೊಸ ಕಾರು ಖರೀದಿಸಿ ಕೋ-ಆಪರೇಟಿವ್ ಸೊಸೈಟಿಗೆ ಉಂಡೆನಾಮ ತಿಕ್ಕಿದ ಅಸಾಮಿ..! ಪುತ್ತೂರಿನ ಈ ಖತರ್ನಾಕ್ ಕಳ್ಳ ಈಗ ಪೊಲೀಸರ ಅತಿಥಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget