ಕ್ರೈಂರಾಜಕೀಯವೈರಲ್ ನ್ಯೂಸ್

ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಎಂದದ್ದೇಕೆ ವಿಜಯೇಂದ್ರ..? ಏನಿದು ನೂತನ ಬಿಜೆಪಿ ರಾಜ್ಯಾಧ್ಯಕ್ಷನ ಗಂಭೀರ ಆರೋಪ?

181

ನ್ಯೂಸ್‌ ನಾಟೌಟ್‌: ಪಕ್ಷದ ಕಾರ್ಯಕರ್ತರನ್ನು (BJP Workers) ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ (Harassment) ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಗಂಭೀರ ಆರೋಪ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಜಯೇಂದ್ರ ಬರೆದುಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ (Police) ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ವಿಜಯೇಂದ್ರ ಧೈರ್ಯ ತುಂಬಿದ್ದಾರೆ.

ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂಬ ಮಾಹಿತಿಯನ್ನು ವಿಜಯೇಂದ್ರ ಹಂಚಿಕೊಂಡಿದ್ದಾರೆ.

ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಭರವಸೆ ನೀಡಿದ್ದಾರೆ.

See also  ಪವಿತ್ರಾ ಗೌಡ ಮನೆಯಲ್ಲಿ ಶ್ವಾನಗಳನ್ನು ನೋಡಿಕೊಳ್ಳುತ್ತಿದ್ದವ ಜೈಲು ಪಾಲು..! ದುಬಾರಿ ಶ್ವಾನಗಳು ದರ್ಶನ್ ಮನೆಗೆ ಶಿಫ್ಟ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget