ಕರಾವಳಿರಾಜಕೀಯ

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ಗೆ ಮಂಗಳೂರಲ್ಲಿ ಚಿಕಿತ್ಸೆ

277

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ಭಾನುವಾರ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮಂಗಳೂರಿಗೆ ಭಾನುವಾರ ರಾತ್ರಿ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸ್ವಾಗತ ಮಾಡಿದ್ದ ಅರುಣ್‌ ಸಿಂಗ್‌ ಅವರೂ ಮಂಗಳೂರಲ್ಲೇ ವಾಸ್ತವ್ಯ ಹೂಡಿದ್ದರು. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಪಕ್ಷದ ಗೆಲುವಿಗಾಗಿ ನಿರಂತರ ಬಿಡುವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ.

See also  ಕಡಬ: ಡೆಂಗ್ಯೂ ಹಾಗೂ ಮಲೇರಿಯಾ ಜ್ವರಕ್ಕೆ ಕೊನೆಯುಸಿರೆಳೆದ ಯುವಕ,31 ವರ್ಷ ಪ್ರಾಯದ ಯುವಕನಿಗೆ ಆಗಿದ್ದೇನು?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget