ಕ್ರೈಂ

ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನಿಧನ

ನ್ಯೂಸ್ ನಾಟೌಟ್: ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರಿನಲ್ಲಿ ಎರಡು ವಿದ್ಯಾಮಂದಿರದ ಮಾಲೀಕರಾಗಿರುವ ಡಾ.ನರೇಂದ್ರ ಕುಮಾರ್(45) ಅವರು ಧರ್ಮಸ್ಥಳ, ಕುಕ್ಕೆ ಭೇಟಿಗೆಂದು ಬಂದ ವೇಳೆ ಧರ್ಮಸ್ಥಳದಲ್ಲಿ ನಿಧನರಾಗಿದ್ದಾರೆ.

ಪತ್ನಿ ,ಮಕ್ಕಳು ಸೇರಿ ಒಟ್ಟು ಏಳು ಜನರು ಧರ್ಮಸ್ಥಳ ಸನ್ನಿಧಿ ಗೆಸ್ಟ್ ರೂಂ ನಲ್ಲಿದ್ದರು. ಧರ್ಮಸ್ಥಳ ಕ್ಷೇತ್ರ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದರ್ಶನ ಪಡೆದು ವಾಪಾಸ್ ಬೆಂಗಳೂರಿಗೆ ಹೋಗುವುದಾಗಿ ನಿರ್ಧರಿಸಿದ್ದರು. ಮೃತರು ಪತ್ನಿ ಸಂದರ್ಶಿನಿ ಮತ್ತು ಇಬ್ಬರು ಮಕ್ಕಳಾದ ಪ್ರಜ್ವಲ್ ಮತ್ತು ಕಶಿಕಾ ರನ್ನು ಅಗಲಿದ್ದಾರೆ . ಬೆಳಿಗ್ಗೆ ಏಕಾಏಕಿ ಡಾ.ನರೇಂದ್ರ ಕುಮಾರ್ ಗೆ ಎದೆನೋವು ಕಾಣಿಸಿಕೊಂಡು ಕೂಡಲೇ ಟಿಟಿ ಚಾಲಕನಿಗೆ ಮಕ್ಕಳು ಕರೆ ಮಾಡಿ ವಿಷಯ ತಿಳಿಸಿದಾಗ ಗೆಸ್ಟ್ ಹೌಸ್ ಗೆ ಚಾಲಕ ವಾಹನ ತಂದಾಗ ನಡೆದುಕೊಂಡೆ ಬಂದು ವಾಹನ ಹತ್ತಿದ್ದಾರೆ. ನೇತ್ರಾವತಿ ಬಳಿ ಬರುತ್ತಿದ್ದಾಗ ವಾಹನದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ತರಲಾಗಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜ್ಯೂಸ್‌ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ..! ‘ಡೇಟಿಂಗ್ ಆ್ಯಪ್’ನಲ್ಲಿ ಪರಿಚಯವಾಗಿದ್ದ ಜೋಡಿ..!

ಹೆತ್ತವರನ್ನೇ ಮುಗಿಸಲು ಸ್ಕೆಚ್ ಹಾಕಿದ 13ರ ಬಾಲಕಿ! ಇದರ ಹಿಂದಿನ ಕಾರಣ ತಿಳಿದು ಪೋಷಕರಿಗೆ ಶಾಕ್! ಏನಿದು ಘಟನೆ?

20 ವರ್ಷದ ಮಗಳನ್ನು ಹತ್ಯೆ ಮಾಡಿ ಮೃತದೇಹವನ್ನು ಬೈಕ್ ಗೆ ಕಟ್ಟಿ ಗ್ರಾಮದೆಲ್ಲೆಡೆ ಎಳೆದೊಯ್ದು ತಂದೆ, ಮಗಳ ಮೇಲೆ ಇಷ್ಟೊಂದು ಕೋಪಕ್ಕೆ ಕಾರಣವೇನು..?