ಕರಾವಳಿಪುತ್ತೂರುರಾಜಕೀಯ

ಪುತ್ತೂರು: ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿ ಚಿಹ್ನೆ, ಪ್ರಧಾನಿ ಹೆಸರು ದುರ್ಬಳಕೆ ಆರೋಪ


ನ್ಯೂಸ್ ನಾಟೌಟ್:ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿಯ ಚಿಹ್ನೆ, ಪಕ್ಷದ ಹೆಸರು ಬಳಸಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್‌ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ತನ್ನ ಪ್ರಚಾರ ಸಾಮಗ್ರಿ, ಸಾಮಾಜಿಕ ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು, ಭಾವಚಿತ್ರವನ್ನು ಉಪಯೋಗಿಸುತ್ತಿದ್ದಾರೆ. ಓರ್ವ ಅಭ್ಯರ್ಥಿ ಚುನಾವಣಾ ಆಯೋಗ ತನಗೆ ನೀಡಿದ ಚಿಹ್ನೆಯನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಆದರೆ ಪಕ್ಷೇತರ ಅಭ್ಯರ್ಥಿ ಭಾರತೀಯ ಜನತಾ ಪಾರ್ಟಿಯ ಚಿಹ್ನೆ, ಇತರ ನೋಂದಣಿಗಳನ್ನು ಉಪಯೋಗಿಸುತ್ತಿರುವುದು ನೀತಿ ಸಂಹಿತೆ ಉಲ್ಲಂಘನೆ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Related posts

ವಿಶ್ವ ಬಂಟರ ಕ್ರೀಡಾಕೂಟ: ಪದಕ ಗೆದ್ದು ಮಿಂಚಿದ ಸುಳ್ಯದ ತ್ರಿವಳಿ ರತ್ನಗಳು..! ದೇವಿ ಪ್ರಸಾದ್ ರೈ, ಸರಿತಾ, ಮಹಾಬಲ ರೈ ಚಾಂಪಿಯನ್ಸ್

ಸೈಕ್ಲೋನ್ ಎಫೆಕ್ಟ್,ಇನ್ನೂ ಎರಡು ದಿನ ಮಳೆ ಸುರಿಯುವ ಸಾಧ್ಯತೆ

ಮೊಬೈಲ್ ನಲ್ಲಿ ಮಾತನಾಡುತ್ತಾ ಹೂವು ತಿಂದು ಯುವತಿ ಸಾವು, ನಿಮ್ಮ ಮನೆಯಲ್ಲೂ ಇರುವ ಈ ಹೂವಿನ ಬಗ್ಗೆ ಇರಲಿ ಎಚ್ಚರ..!