ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ಕ್ರಾಸ್ ಘಟಕದ ವತಿಯಿಂದ ಬೃಹತ್ ರಕ್ತದಾನ ಶಿಬಿರ ಶನಿವಾರ (ಮಾ. 22) ಕೆವಿಜಿ ಮೆಡಿಕಲ್ ಕಾಲೇಜಿನ ರಕ್ತದಾನ ಕೇಂದ್ರದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ| ಸಿ.ಆರ್. ಭಟ್ ಶಿಬಿರದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ರಕ್ತ ಕೇಂದ್ರದ ಮುಖ್ಯಸ್ಥೆ ಡಾ. ನವ್ಯ, ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾoಶುಪಾಲ, ಕೆವಿಜಿ ಕಾನೂನು ಕಾಲೇಜಿನ ಆಡಳಿತಾಧಿಕಾರಿ ಪ್ರೊಫೆಸರ್ ಕೆ.ವಿ. ದಾಮೋದರ ಗೌಡ, ರಕ್ತಕೇಂದ್ರದ ಸಿಬ್ಬಂದಿ ವರ್ಗ, ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕಿ, ಉಪನ್ಯಾಸಕಿ ನಯನ ಪಿ.ಯು, ರೆಡ್ಕ್ರಾಸ್ ಘಟಕದ ಸಂಯೋಜಕಿ ಉಪನ್ಯಾಸಕಿ ಅರ್ಚನಾ ಆರ್. ರೈ, ಉಪನ್ಯಾಸಕರು, ರಕ್ತದಾನಿ ವಿದ್ಯಾರ್ಥಿಗಳು ಹಾಜರಿದ್ದರು. ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷಾ ಕೆ.ವಿ. ಕಾರ್ಯಕ್ರಮ ನಿರೂಪಿಸಿದರು.