ಪುತ್ತೂರು

ಮಾಜಿ ಶಾಸಕ ಇದಿನಬ್ಬ ಪುತ್ರ ಬಿ.ಎಂ. ಪಾಷಾ ಮನೆಗೆ ನುಗ್ಗಲು ಯತ್ನ, ವಿಶ್ವ ಹಿಂದೂ ಪರಿಷತ್‌ ಶರಣ್ ಪಂಪ್ ವೆಲ್ ವಿರುದ್ದ ದೂರು

ಉಳ್ಳಾಲ: ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಿ.ಎಂ. ಭಾಷಾ ಮನೆಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಹಾಗೂ ಮತ್ತಿತರ ಕಾರ್ಯಕರ್ತರ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೇಲಂಗಡಿಯ ಅಬೂಬಕ್ಕರ್ ಎಂಬುವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಗ್ರ ನಂಟಿರುವ ಹಿನ್ನೆಲೆಯಲ್ಲಿ ಎನ್ ಐ ಎ ಅಧಿಕಾರಿಗಳು ಇತ್ತೀಚೆಗೆ ಭಾಷಾ ಮನೆಗೆ ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಇದಿನಬ್ಬ ಕುಟುಂಬದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಿಂದೂ ಸಂಘಟನೆಗಳು ಪಾಷಾ ಮನೆಯ ಎದುರು ಪ್ರತಿಭಟನೆ ನಡೆಸಿದವು.

Related posts

ಮಂಗಳೂರು: ನಾಳೆ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌, ಲೋಕಸಭೆಗೆ ಅಭ್ಯರ್ಥಿ ಯಾರಾಗ್ತಾರೆ? ಬಿಜೆಪಿಯಿಂದ ಪುತ್ತಿಲ, ಬ್ರಿಜೇಶ್‌ ಚೌಟ, ನಳಿನ್‌ ಬಗ್ಗೆ ಚರ್ಚೆ ?

ಪುತ್ತೂರು:ಕಾಂಗ್ರೆಸ್ ಮುಖಂಡ ಸೇರಿದಂತೆ ಮನೆಮಂದಿಯನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿದ್ದ ಪ್ರಕರಣ,6 ಮಂದಿ ಬಂಧನ;ಆರೋಪಿಗಳ ಹಿನ್ನಲೆಯೇನು?

ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ದಯಾನಂದ ಪೆರುವಾಜೆ ನೇಮಕ