Latest

ಬಂಟ್ವಾಳ: ಯುವಕನ ಕಡಿದು ಬರ್ಬರ ಹತ್ಯೆ, ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಕೃತ್ಯ

3.5k

ನ್ಯೂಸ್‌ ನಾಟೌಟ್:ಬಂಟ್ವಾಳದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು (ಮೇ 27) ನಡೆದಿದೆ‌.ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಸಹೋದರ ರಹೀಮ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇವರು ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ರಹೀಮ್ ಜೊತೆ ಇನ್ನೊಬ್ಬ ವ್ಯಕ್ತಿ ಕೂಡ ಇದ್ದು ಆತನಿಗೂ ಕಡಿಯಲಾಗಿದ್ದು, ಕೈಗೆ ಗಾಯ ವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಅವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿದ್ದಾರೆ.

See also  ರೋಗಿಗಳ ವೇಷದಲ್ಲಿ ಆಸ್ಪತ್ರೆಗೆ ನುಗ್ಗಿ ವೈದ್ಯೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?
  Ad Widget   Ad Widget     Ad Widget   Ad Widget   Ad Widget   Ad Widget