Latestಕ್ರೈಂದೇಶ-ವಿದೇಶರಾಜಕೀಯ

ಗಡಿಯಲ್ಲಿ ಬುಲ್ಡೋಜರ್ ಘರ್ಜನೆ, 28 ಮದರಸಾ, 9 ಮಸೀದಿ, 6 ದೇವಾಲಯ, 1 ಈದ್ಗಾ ನೆಲಸಮ..! ಪಾಕ್-ಭಾರತ ಸಂಘರ್ಷದ ನಡುವೆ ಏನಿದು ಹೊಸ ಕಾರ್ಯಾಚರಣೆ..?

679

ನ್ಯೂಸ್ ನಾಟೌಟ್: ಸಿಎಂ ಯೋಗಿ ಆದಿತ್ಯನಾಥ್‌ ಸೂಚನೆ ಮೇರೆಗೆ ಉತ್ತರ ಪ್ರದೇಶದ ನೇಪಾಳ ಗಡಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಕಟ್ಟಡಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿದೆ.

ಸ್ಥಳೀಯ ಜಿಲ್ಲಾ ಮತ್ತು ಪೊಲೀಸ್ ಆಡಳಿತವು ಶ್ರಾವಸ್ತಿ, ಬಲರಾಮ್‌ಪುರ, ಬಹ್ರೈಚ್, ಮಹಾರಾಜ್‌ಗಂಜ್ ಮತ್ತು ಲಖಿಂಪುರ ಜಿಲ್ಲೆಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧೆಡೆ 28 ಮದರಸಾಗಳು (Madrasas), 9 ಮಸೀದಿಗಳು (Mosques), 6 ದೇವಾಲಯಗಳು, 1 ಈದ್ಗಾವನ್ನ ನೆಲಸಮಗೊಳಿಸಲಾಗಿದೆ.

ರಾಜ್ಯದಲ್ಲಿ ನಡೆದ ಅತಿದೊಡ್ಡ ಬುಲ್ದೋಜರ್‌ ಕಾರ್ಯಾಚರಣೆ ಇದಾಗಿದ್ದು, ಶ್ರಾವಸ್ತಿ ಜಿಲ್ಲೆಯ ಭಗವಾನ್‌ಪುರ ಭೈಸಾಹಿ, ಮಹಾರಾಜ್‌ಗಂಜ್‌, ಪೋಖರ್ಭಿಂಡಾ, ತಹಸಿಲ್, ಸೀತಾಲಪುರ ಗ್ರಾಮಗಳು ಸೇರಿದಂತೆ ವಿವಿಧೆಡೆ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ 28 ಮದರಸಾಗಳನ್ನು ತೆರವುಗೊಳಿಸಲಾಗಿದೆ. ಅಲ್ಲದೇ ಕೆಲ ಮದರಸಾಗಳಿಗೆ ಬೀಗ ಜಡಿಯಲಾಗಿದೆ. ಜೊತೆಗೆ ಬಲರಾಮ್‌ ಪುರ, ಬಹ್ರೈಚ್, ಮಹಾರಾಜ್‌ ಗಂಜ್ ಮತ್ತು ಲಖಿಂಪುರ ಖೇರಿಗಳಲ್ಲಿನ 9 ಮಸೀದಿಗಳು, 6 ದೇವಾಲಯಗಳು ಮತ್ತು 1 ಈದ್ಗಾ ವನ್ನ ತೆರವುಗೊಳಿಸಲಾಗಿದೆ ಎಂದು ಶ್ರಾವಸ್ತಿ ಜಿಲ್ಲಾಡಳಿತ ತಿಳಿಸಿದೆ. 

ಮೂರೂವರೆ ಗಂಟೆಯಲ್ಲಿ ಭಾರತದ 4 ರಾಜ್ಯ, 24 ನಗರಗಳಿಗೆ ಪಾಕ್ ದಾಳಿ..! ಭಾರತೀಯ ಸೇನೆಯಿಂದ ಅಧಿಕೃತ ಮಾಹಿತಿ 

See also  ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಮಲ್ಪೆಯ ಜೀವರಕ್ಷಕ ತಂಡ
  Ad Widget   Ad Widget     Ad Widget   Ad Widget   Ad Widget   Ad Widget