ಕ್ರೈಂವೈರಲ್ ನ್ಯೂಸ್

ಬುರ್ಖಾ ಧರಿಸಿದ್ದಕ್ಕೆ ಪರೀಕ್ಷೆಗೆ ಪ್ರವೇಶ ನಿರಾಕರಣೆ..! ಏನಿದು ವಿವಾದ?

200

ನ್ಯೂಸ್ ನಾಟೌಟ್ : ಬುರ್ಖಾ ಧರಿಸಿದ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿದ ಘಟನೆ ತೆಲಂಗಾಣದ ಕಾಲೇಜಿನಲ್ಲಿ ಇಂದು ನಡೆದಿದೆ. ಸಂತೋಷ್ ನಗರದಲ್ಲಿರುವ ಕೆವಿ ರಂಗಾ ರೆಡ್ಡಿ ಪದವಿ ಮಹಿಳಾ ಕಾಲೇಜಿನ ಸಿಬ್ಬಂದಿ ಶನಿವಾರ ನಡೆದ ಪರೀಕ್ಷೆಯಲ್ಲಿ ಬುರ್ಖಾಧಾರಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇದರಿಂದ ತಾವು ಸುಮಾರು ಅರ್ಧ ಗಂಟೆ ಹೊರಗೆ ಕಾಯುವಂತಾಗಿತ್ತು ಹಾಗೂ ಬುರ್ಖಾ ತೆಗೆದ ಬಳಿಕವಷ್ಟೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಇದರ ಬಳಿಕ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಅಲಿ ನೀಡಿದ ಹೇಳಿಕೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರು ತಮ್ಮ ದೇಹವನ್ನು ಸಾಧ್ಯವಾದಷ್ಟು ಮುಚ್ಚಿಕೊಳ್ಳಬೇಕು. ಮಹಿಳೆಯರು ಕಿರಿದಾದ ಉಡುಪು ಧರಿಸಿದ್ದಾಗ ಮಾತ್ರ ಸಮಸ್ಯೆ ಉದ್ಭವಿಸುತ್ತದೆ, ಮೈ ಪೂರ್ತಿ ಬುರ್ಖಾ ಹಾಕಿದರೆ ಸಮಸ್ಯೆ ಇಲ್ಲ ಎಂದು ಘಟನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಕೆಲವು ಹೆಡ್ ಮಾಸ್ಟರ್ ಅಥವಾ ಪ್ರಿನ್ಸಿಪಾಲ್ ಇದನ್ನು ಮಾಡುತ್ತಿರಬಹುದು. ಆದರೆ ನಮ್ಮ ನೀತಿ ಸಂಪೂರ್ಣ ಜಾತ್ಯತೀತವಾದುದು. ಜನರು ತಮಗೆ ಬಯಸಿದ್ದನ್ನು ಧರಿಸಬಹುದು. ಬುರ್ಖಾ ಧರಿಸುವಂತೆ ಇಲ್ಲ ಎಂದು ಎಲ್ಲಿಯೂ ಬರೆದಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಪ್ರತಿಯೊಬ್ಬರಿಗೂ ತಾವು ಬಯಸಿದ್ದನ್ನು ಧರಿಸುವ ಹಕ್ಕು ಇದೆ. ಆದರೆ ನಾವು ಹಿಂದೂ ಅಥವಾ ಮುಸ್ಲಿಂ ಸಂಪ್ರದಾಯಕ್ಕೆ ಅನುಗುಣವಾಗಿ ಉಡುಪು ಧರಿಸುವುದನ್ನು ಅಭ್ಯಾಸ ಮಾಡಬೇಕು. ಯುರೋಪಿಯನ್ ಸಂಸ್ಕೃತಿಯನ್ನು ಅನುಸರಿಸಬಾರದು. ನಮ್ಮ ಉಡುಪು ಸಂಸ್ಕೃತಿಯನ್ನು ನಾವು ಗೌರವಿಸಬೇಕು. ಮುಖ್ಯವಾಗಿ ಮಹಿಳೆಯರು ಚಿಕ್ಕ ಬಟ್ಟೆಗಳನ್ನು ಧರಿಸಬಾರದು. ಅವರು ಸಾಧ್ಯವಾದಷ್ಟು ತಮ್ಮ ಮೈಯನ್ನು ಮುಚ್ಚಿಕೊಳ್ಳಬೇಕು” ಎಂದು ಹೇಳಿದ್ದಾರೆ.

See also  ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಮಗಳನ್ನು ಗಂಡನ ಮನೆಯಿಂದ ಅಪಹರಿಸಿದ ಪೋಷಕರು..! ಪೊಲೀಸರ ವಿಚಾರಣೆಯಲ್ಲಿ ವಧು ನೀಡಿದ ಟ್ವಿಸ್ಟ್ ಏನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget