ಕರಾವಳಿಕ್ರೈಂ

ತೀರ್ಥಹಳ್ಳಿಯಲ್ಲಿ ಕಾರು-ಬಸ್‌ ನಡುವೆ ಅಪಘಾತ: ಮಂಗಳೂರು ಕುಪ್ಪೆಪದವಿನ ಯುವಕ ಸಾವು

205

ನ್ಯೂಸ್‌ ನಾಟೌಟ್‌: ಕಾರು ಮತ್ತು ಖಾಸಗಿ ಬಸ್‌ ನಡುವೆ ಅಪಘಾತ ಸಂಭವಿಸಿ ಮಂಗಳೂರಿನ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಮೃತ ಯುವಕನನ್ನು ಮಂಗಳೂರು ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ತೀರ್ಥಹಳ್ಳಿ ಕಡೆಯಿಂದ ಬಂದ ಬಸ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

See also  ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯ ಸದಸ್ಯರಾಗಿ ಕೆ.ಪಿ. ಜಾನಿ ಮರುನೇಮಕ, ಸಂಪಾಜೆಗೆ ಸಂದ ಗೌರವ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget