ಕ್ರೈಂಬೆಂಗಳೂರುವೈರಲ್ ನ್ಯೂಸ್

ಪತ್ನಿ, ಮಕ್ಕಳಿಗೆ ವಿಷವುಣಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಕ್ಯಾಬ್ ಡ್ರೈವರ್..! ಇಡೀ ಕುಟುಂಬವೇ ದುರಂತ ಅಂತ್ಯ..!

156

ನ್ಯೂಸ್ ನಾಟೌಟ್: ಕಲಬುರಗಿಯಿಂದ ಬಂದು ಬೆಂಗಳೂರಿನಲ್ಲಿ ವಾಸವಿದ್ದು, ಕ್ಯಾಬ್ ಡ್ರೈವಿಂಗ್ ಮಾಡುತ್ತಾ ಕುಟುಂಬ ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಇದೀಗ ತನ್ನ ಕುಟುಂಬದಲ್ಲಿ ಹೆಂಡತಿ ಹಾಗೂ ಇಬ್ಬರು ಮಕ್ಕಳಿಗೆ ವಿಷ ಹಾಕಿ ಕೊಂದು ತಾನೂ ನೇಣಿಗೆ ಶರಣಾಗಿರುವ ಘಟನೆ(ಅ.14) ಇಂದು ನಡೆದಿದೆ.

ಮೃತರನ್ನು ಕ್ಯಾಬ್ ಚಾಲಕ ಅವಿನಾಶ್ (38), ಪತ್ನಿ ಮಮತಾ (30) ಹಾಗೂ ಮಗಳಾದ ಅಧೀರ್ (5) ಮತ್ತು ಅಣ್ಣಯ್ಯ (2.5) ಎಂದು ಗುರುತಿಸಲಾಗಿದೆ. ಮೊದಲಿಗೆ ಮಕ್ಕಳನ್ನ ಕೊಂದು ಆ ಬಳಿಕ ಪತಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ಅವಿನಾಶ್ ಕಲಬುರಗಿ ಮೂಲದವರಾಗಿದ್ದು, ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಇಲ್ಲಿ ಕ್ಯಾಬ್ ಚಾಲಕ ನಾಗಿ ಕೆಲಸ ಮಾಡುತ್ತಿದ್ದನು. ರಾಜಾನುಕುಂಟೆ ಬಳಿಯ ಸಿಂಗನಾಯಕನಹಳ್ಳಿಯ ನರಸಪ್ಪ ಎನ್ನುವವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು.

ಆದರೆ, ಇಂದು ಬೆಳಗ್ಗೆ ಎಷ್ಟೇ ಹೊತ್ತಾದರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮನೆ ಮಾಲೀಕರು ಕಿಟಕಿಯಿಂದ ನೋಡಿದಾಗ ಪತಿ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಡಲೇ ಚಾಲಕನ ಸಹೋದರಿನಿಗೆ ಮಾಹಿತಿ ನೀಡಲಾಗಿದೆ.
ಸ್ಥಳಕ್ಕೆ ಬಂದ ಅವಿನಾಶ್‌ನ ಸಹೋದರ ಉದಯ್ ಮನೆಯಲ್ಲಿ ಎಲ್ಲರೂ ಮೃತಪಟ್ಟಿರುವುದನ್ನು ನೋಡಿ ಶಾಕ್ ಆಗಿದ್ದಾರೆ. ಕುಟುಂಬದವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Click

https://newsnotout.com/2024/10/kiccha-sudeepa-bigboss-kananda-news-viral-news-kananda-news/
https://newsnotout.com/2024/10/darshan-bail-issue-to-verdict-kannada-news/
https://newsnotout.com/2024/10/siddaramayya-rti-kannada-news-snehamai-krishna/
https://newsnotout.com/2024/10/kannada-director-of-rajkumar-films-nomore/
See also  ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಖಾತೆ..! ಹಣಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget